




ಕಡಬ ಟೈಮ್ಸ್,ಉಪ್ಪಿನಂಗಡಿ: ಉಪ್ಪಿನಂಗಡಿ ಸಮೀಪದ ಕರುವೇಲ್ ಬಳಿ ಚಾಲಕನ ನಿಯಂತ್ರಣ ತಪ್ಪಿದ ಲಾರಿಯೊಂದು ರಸ್ತೆ ಬದಿಗೆ ಉರುಳಿ ಬಿದ್ದ ಘಟನೆ ಮಂಗಳವಾರ ಬೆಳಿಗ್ಗೆ ನಡೆದಿದೆ. ಇದರಿಂದಾಗಿ ಚಾಲಕ ಗಂಭೀರ ಗಾಯಗೊಂಡಿದ್ದು, ಆಸ್ಪತ್ರೆಗೆ ದಾಖಲಿಸಲಾಗಿದೆ
ಬೆಂಗಳೂರು ಕಡೆಗೆ ತೆರಳುತ್ತಿದ್ದ ಬೃಹತ್ ಗಾತ್ರದ ಲಾರಿಯು ಕರುವೇಲ್ ಹಾಗೂ ನೆಕ್ಕಿಲಾಡಿ ಮಧ್ಯೆ ಕಾಂಕ್ರೀಟ್ ರಸ್ತೆಯಲ್ಲಿ ಚಾಲಕನ ನಿಯಂತ್ರಣ ತಪ್ಪಿ ರಸ್ತೆ ಬದಿಗೆ ಉರುಳಿ ಬಿದ್ದಿದೆ.

ಈಘಟನೆಯಿಂದಾಗಿ ಕೆಲ ಕಾಲ ರಾಷ್ಟ್ರೀಯ ಹೆದ್ದಾರಿಯಲ್ಲಿ ವಾಹನ ಸಂಚಾರಕ್ಕೆ ಅಡಚಣೆಯಾಯಿತು. ಸ್ಥಳೀಯರುಮತ್ತು ಕೆಲ ವಾಹನ ಸವಾರರು ವಾಹನ ಸುಗಮವಾಗಿ ಸಂಚರಿಸಲು ಸಹರಿಸಿದರು.