ಕೊಯಿಲ:ನದಿಗೆ ಸ್ನಾನಕ್ಕಿಳಿದ ವ್ಯಕ್ತಿ ಕಣ್ಮರೆ:ಮುಳುಗು ತಜ್ಞರಿಂದ ಹುಡುಕಾಟ

ಕೊಯಿಲ:ನದಿಗೆ ಸ್ನಾನಕ್ಕಿಳಿದ ವ್ಯಕ್ತಿ ಕಣ್ಮರೆ:ಮುಳುಗು ತಜ್ಞರಿಂದ ಹುಡುಕಾಟ

Kadaba Times News

ಕಡಬ ಟೈಮ್ಸ್: ಕಡಬ ತಾಲೂಕಿನ ಕೊಯಿಲ ಗ್ರಾಮದ ನೀಡೇಲು ಎಂಬಲ್ಲಿ ಕುಮಾರಧಾರ ನದಿಯಲ್ಲಿ ಸ್ನಾನಕ್ಕಿಳಿದ ವ್ಯಕ್ತಿ ಗುರುವಾರದಂದು ನೀರಿನಲ್ಲಿ ಮುಳುಗಿ ನಾಪತ್ತೆಯಾಗಿದ ಘಟನೆ ನಡೆದಿದೆ.

ಕೊಯಿಲದ ಗುಲ್ಗೋಡಿ ನಿವಾಸಿ ರತ್ನಾಕರ ಕುಮಾರ್ (ಉದಯ ಪೂಜಾರಿ) (32) ಎಂಬವರು ನೀರಿನಲ್ಲಿ ಮುಳುಗಿದ ವ್ಯಕ್ತಿ. ಈ ಬಗ್ಗೆ ದೂರು ನೀಡಿರುವ ರತ್ನಾಕರ ಕುಮಾರ್ ಅವರ ಪತ್ನಿ ಚೈತ್ರಾ ತನ್ನ ಪತಿ ನದಿಯಲ್ಲಿ ಸ್ನಾನಕ್ಕಿಳಿದಾಗ ನೀರಲ್ಲಿ ಮುಳುಗಿ ನಾಪತ್ತೆಯಾಗಿದ್ದಾರೆ ಪತ್ತೆ ಮಾಡಿ ಕೊಡುವಂತೆ ವಿನಂತಿಸಿಕೊಂಡಿದ್ದಾರೆ.

ಗುರುವಾರ ಸಂಜೀವ ಪೂಜಾರಿ ಮಾರಂಗ, ಹರೀಶ ಪಲ್ಲತ್ತಾರು, ಸತ್ಯಾ ರೈ ಸುಣ್ಣಾಡಿ, ಬೇಬಿ ಗೋಳಿತ್ತಡಿ ಅವರೊಂದಿಗೆ ಪತಿ ನದಿಗೆ ಹೋಗಿದ್ದಾರೆ. ಆ ವೇಳೆ ಈ ದುರ್ಘಟನೆ ನಡೆದಿದ್ದು,ಅವರನ್ನು ರಕ್ಷಣೆ ಮಾಡಲು ಯತ್ನಿಸಿದರೂ ಸಾಧ್ಯವಾಗಲಿಲ್ಲ ಎಂದು ದೂರಿನಲ್ಲಿ ತಿಳಿಸಲಾಗಿದೆ.

ಕಡಬ ಪೋಲೀಸರು ದೂರು ದಾಖಲಿಸಿ ಕೊಂಡಿದ್ದು, ಘಟನಾ ಸ್ಥಳಕ್ಕೆ ಕಡಬ ಎಸ್‍ಐ ರುಕ್ಮ ನಾಯ್ಕ್, ಎಎಸ್‍ಐ ರವಿ ಭೇಟಿ ನೀಡಿದ್ದಾರೆ.

ಮುಳುಗು ತಜ್ಞ ರಿಂದ ಹುಡುಕಾಟ

ಅಗ್ನಿಶಾಮಕ ದಳದ ಸಿಬ್ಬಂದಿ ಹಾಗೂ ಮುಳುಗು ತಜ್ಞರು ನದಿಯಲ್ಲಿ ಮೃತದೇಹ ಹುಡುಕಾಟ ನಡೆಸಿದರೂ ಸಂಜೆಯ ವರೆಗೆ ಮೃತ ದೇಹ ಪತ್ತೆಯಾಗಲಿಲ್ಲ. ಶುಕ್ರವಾರ ಬೆಳಿಗ್ಗೆ ಹುಡಕಾಟ ನಡೆಸಲಾಗುವುದು ಎಂದು ಪೋಲೀಸರು ಮಾಹಿತಿ‌ ನೀಡಿದ್ದಾರೆ.

#buttons=(Ok, Go it!) #days=(20)

Our website uses cookies to enhance your experience. Learn More
Ok, Go it!
To Top