




ಕಡಬ ಟೈಮ್ಸ್ (KADABA TIMES):ನವದೆಹಲಿ: ಕೇಂದ್ರ ಸರ್ಕಾರದ ಕೃಷಿ ಕ್ಷೇತ್ರದ ಮಸೂದೆ ವಿರೋಧಿಸಿ ಸೆಪ್ಟೆಂಬರ್ 24ರಿಂದ 26ರವರೆಗೆ ರೈಲು ತಡೆ ಪ್ರತಿಭಟನೆ ನಡೆಸುವುದಾಗಿ ರೈತ ಸಂಘಟನೆ ತಿಳಿಸಿದೆ.
ಕೇಂದ್ರ ಸರ್ಕಾರದ ರೈತ ವಿರೋಧಿ ಮಸೂದೆಗೆ ತೀವ್ರ ವಿರೋಧ ವ್ಯಕ್ತಪಡಿಸುವುದಾಗಿ ಹೇಳಿದೆ. ಕೃಷಿ ಕ್ಷೇತ್ರದ 3 ಮಸೂದೆ ವಿರುದ್ಧ ಸೆಪ್ಟೆಂಬರ್ 24ರಿಂದ 26ರವರೆಗೆ ರೈಲು ತಡೆದು ಪ್ರತಿಭಟನೆ ನಡೆಸಲು ನಿರ್ಧರಿಸಿರುವುದಾಗಿ ಕಿಸಾನ್ ಮಜ್ದೂರ್ ಸಂಘರ್ಷ ಸಮಿತಿಯ ಪ್ರಧಾನ ಕಾರ್ಯದರ್ಶಿ ಸರ್ವಾನ್ ಸಿಂಗ್ ಪಂಥೇರ್ ತಿಳಿಸಿದ್ದಾರೆ.

ಈ ಮಸೂದೆ ವಿರುದ್ಧ ಈಗಾಗಲೇ ಕಿಸಾನ್ ಸಂಘ ಅಮೃತ್ ಸರದಲ್ಲಿ ಪ್ರತಿಭಟನೆ ನಡೆಸಿತ್ತು. ಈ ಮಸೂದೆ ರೈತರಿಗೆ ಸಹಾಯಕವಾಗಲಿದೆ ಎಂಬುದು ಸುಳ್ಳು. ಮಸೂದೆ ಜಾರಿಯಾದರೆ ಮುಂದೆ ನಾವು ಕಾರ್ಪೋರೇಟ್ ಗಳ ಕೈಗೊಂಬೆಯಾಗಬೇಕಾಗುತ್ತದೆ ಎಂದು ಆರೋಪಿಸಿದ್ದಾರೆ.