




ಕಡಬ ಟೈಮ್ಸ್ (KADABA TIMES):ಕಾಣಿಯೂರು: ಜಿಲ್ಲಾ ಉಸ್ತುವಾರಿ ಸಚಿವರ 5 ಲಕ್ಷ ರೂ ಅನುದಾನದಲ್ಲಿ ಕಾಣಿಯೂರು ಶ್ರೀ ಲಕ್ಷ್ಮೀನರಸಿಂಹ ಭಜನಾ ಮಂದಿರದ ನೂತನ ಪಾಕಶಾಲೆಯ ಕಟ್ಟಡ ನಿರ್ಮಾಣಕ್ಕೆ ಶಿಲಾನ್ಯಾಸ ಕಾರ್ಯಕ್ರಮ ಶುಕ್ರವಾರ ನಡೆಯಿತು.
ಅರ್ಚಕ ಶಿವರಾಮ ಉಪಾಧ್ಯಾಯ ಕಲ್ಪಡರವರು ವಿವಿಧ ಪೂಜಾ ವಿಧಿ ವಿಧಾನಗಳೊಂದಿಗೆ ಶಿಲಾನ್ಯಾಸ ಕಾರ್ಯಕ್ರಮವನ್ನು ನೆರವೇರಿಸಿದರು.

ಈ ಸಂದರ್ಭದಲ್ಲಿ ಭಜನಾ ಮಂಡಳಿ ಅಧ್ಯಕ್ಷ ವಾಸುದೇವ ನಾಯ್ಕ್ ತೋಟ, ಉಪಾಧ್ಯಕ್ಷ ವಿಶ್ವನಾಥ ಓಡಬಾಯಿ, ಕಾರ್ಯದರ್ಶಿ ಜಯಂತ ಅಬೀರ, ಮಾಜಿ ಅಧ್ಯಕ್ಷ ಪರಮೇಶ್ವರ ಅನಿಲ, ಇಂಜಿನೀಯರ್ ತಿಲಕ್ರಾಜ್, ಬೆಳಂದೂರು ಬಿಜೆಪಿ ಮಹಾಶಕ್ತಿ ಕೇಂದ್ರದ ಅಧ್ಯಕ್ಷ ಗಣೇಶ್ ಉದನಡ್ಕ, ಭಜನಾ ಮಂಡಳಿ ಸದಸ್ಯರು ಉಪಸ್ಥಿತರಿದ್ದರು.