ಕಡಬ: ಕೋವಿಡ್ ಸೋಂಕಿನಿಂದ ಮೃತಪಟ್ಟ ವ್ಯಕ್ತಿ ➤ ಪಿಎಫ್ಐ ಕಾರ್ಯಕರ್ತರಿಂದ ಅಂತ್ಯಕ್ರಿಯೆ

ಕಡಬ: ಕೋವಿಡ್ ಸೋಂಕಿನಿಂದ ಮೃತಪಟ್ಟ ವ್ಯಕ್ತಿ ➤ ಪಿಎಫ್ಐ ಕಾರ್ಯಕರ್ತರಿಂದ ಅಂತ್ಯಕ್ರಿಯೆ

Kadaba Times News

ಕಡಬ ಟೈಮ್ಸ್ (KADABA TIMES):ಕೊರೋನಾ ಸೋಂಕಿನಿಂದ ಮೃತಪಟ್ಟ ಕಡಬದ ವ್ಯಕ್ತಿಯ ಅಂತ್ಯ ಸಂಸ್ಕಾರವನ್ನು  ಪಾಪ್ಯುಲರ್ ಫ್ರಂಟ್ ಆಫ್ ಇಂಡಿಯಾದ ಕಾರ್ಯಕರ್ತರು ಸರ್ಕಾರದ ಎಲ್ಲಾ ಮಾರ್ಗಸೂಚಿ ಮತ್ತು ಮುಂಜಾಗೃತಾ ಕ್ರಮಗಳನ್ನು ಅನುಸರಿಸಿ ಗೌರವಯುತವಾಗಿ ನೆರವೇರಿಸಿದ್ದಾರೆ.

 

ಕಡಬ ತಾಲೂಕಿನ ಪೆರ್ಲದಕೆರೆ ಮೂಲದ ವ್ಯಕ್ತಿಯೊಬ್ಬರು ಕೋವಿಡ್ ಸೋಂಕಿಗೆ ತುತ್ತಾಗಿ ನಿಧನರಾಗಿದ್ದರು. ಮೃತ ವ್ಯಕ್ತಿಯ ಕುಟುಂಬಸ್ಥರ ಸಹಕಾರದಿಂದ ಹಿಂದೂ ಸಮುದಾಯದ ಧಾರ್ಮಿಕ ಸಂಪ್ರದಾಯದಂತೆ ವಿಧಿ ವಿಧಾನಗಳನ್ನು ನೆರವೇರಿಸಿ ಅಂತ್ಯಕ್ರಿಯೆ ನಡೆಸಲಾಯಿತು.

 

ಈ ಸಂದರ್ಭದಲ್ಲಿ ಸಿದ್ದೀಕ್ ನೆಲ್ಯಾಡಿ ನೇತೃತ್ವದ ಪಿಎಫ್ ಐ  ಕಡಬ ವಲಯದ ಕೊರೋನಾ  ವಾರಿಯರ್ಸ್‌ ತಂಡದ ನೌಷದ್ ಕಡಬ, ಸಮದ್ ಕೋಡಿಂಬಾಳ, ನವಾಜ್ ಕಡಬ, ಶರೀಫ್ ಕಡಬ ಪಾಲ್ಗೊಂಡಿದ್ದರು.

#buttons=(Ok, Go it!) #days=(20)

Our website uses cookies to enhance your experience. Learn More
Ok, Go it!
To Top