




ಕಡಬ ಟೈಮ್ಸ್ (KADABA TIMES)ಭಾರತೀಯ ಜನತಾ ಪಾರ್ಟಿಯ ಸುಳ್ಯ ಮಂಡಲ ಯುವ ಮೋರ್ಚಾ ಹಾಗೂ ಕಡಬ ಮಹಾಶಕ್ತಿ ಕೇಂದ್ರದ ವತಿಯಿಂದ ಪ್ರಧಾನ ಮಂತ್ರಿ ನರೇಂದ್ರ ಮೋದಿಯವರ ಜನ್ಮ ದಿನದ ಅಂಗವಾಗಿ ಆಸ್ಪತ್ರೆಯಲ್ಲಿ ಸೇವೆ ಸಲ್ಲಿಸುತ್ತಿರುವವರಿಗೆ ಹಣ್ಣು ಹಂಪಲು ವಿತರಿಸಿದರು.
ಆರಂಭದಲ್ಲಿ ಕಡಬದ ಹಿರಿಯ ವೈದ್ಯ ಡಾ| ಸಿ.ಕೆ ಶಾಸ್ತ್ರೀ ಮತ್ತು ಸಿಬ್ಬಂದಿಗಳಿಗೆ ಹಾಗೂ ಕಡಬ ಸಮುದಾಯ ಆರೋಗ್ಯ ಕೇಂದ್ರದ ವೈದ್ಯಾಧಿಕಾರಿಗಳು ಮತ್ತು ಸಿಬ್ಬಂದಿ ವರ್ಗಕ್ಕೆ ಹಣ್ಣು ಹಂಪಲು ವಿತರಿಸಲಾಯಿತು.

ಈ ಸಂದರ್ಭದಲ್ಲಿ ಬಿಜೆಪಿ ಮುಖಂಡರಾದ ಕೃಷ್ಣ ಶೆಟ್ಟಿ ಕಡಬ, ಸುಳ್ಯ ಮಂಡಲ ಬಿಜೆಪಿ ಕಾರ್ಯದರ್ಶಿ ಪ್ರಕಾಶ್ ಎನ್.ಕೆ, ಸುಳ್ಯ ಮಂಡಲ ಬಿಜೆಪಿ ಯುವಮೋರ್ಚಾದ ಅಧ್ಯಕ್ಷ ಶ್ರೀಕೃಷ್ಣ ಎಂ.ಆರ್, ಕಡಬ ಮಹಾ ಶಕ್ತಿಕೇಂದ್ರದ ಅಧ್ಯಕ್ಷ ಗಿರೀಶ್ ಎ.ಪಿ, ಸೇರಿದಂತೆ ಹಲವು ಮುಖಂಡರು ಹಾಜರಿದ್ದರು.