




ಕಡಬ ಟೈಮ್ಸ್ (KADABA TIMES):ಸಾಹಿತ್ಯ ಚಟುವಟಿಕೆಯಲ್ಲಿ ಹೆಚ್ಚು ತೊಡಗಿಕೊಂಡಿರುವ ನೂಜಿಬಾಳ್ತಿಲದ ಸಮ್ಯಕ್ತ್.ಜೈನ್ ಅನ್ ಲೈನ್ ಸ್ಪರ್ಧೆಯಲ್ಲಿ ಭಾಗವಹಿಸಿ ರಾಜ್ಯ ಮಟ್ಟದ ಗೌರವಕ್ಕೆ ಪಾತ್ರರಾಗಿದ್ದಾರೆ.
ಗುರುಕುಲ ಕಲಾ ಪ್ರತಿಷ್ಠಾನ ರಾಜ್ಯ ಘಟಕ ತುಮಕೂರು ಅಂತರ್ಜಾಲದ ಮುಖೇನ ಗುರುಕುಲ ಪ್ರತಿಷ್ಠಾನ ಅನಾವರಣ ಸ್ಪರ್ಧೆಯನ್ನು ಇತ್ತೀಚೆಗೆ ಆಯೋಜಿಸಿತ್ತು. ಈ ಸಂಸ್ಥೆಯು ಕೊಡಲ್ಪಡುವ ರಾಜ್ಯ ಮಟ್ಟದ ಡಾ॥ಕವಿತಾಕೃಷ್ಣ ಗೌರವಾರ್ಥ ಪ್ರಶಸ್ತಿಗೆ ಇವರು ಭಾಜನರಾಗಿದ್ದಾರೆ.

ಬರವಣಿಗೆಯ ಮೂಲಕ ಸಾಹಿತ್ಯ ಕ್ಷೇತ್ರದಲ್ಲಿ ಹೆಚ್ಚು ತೊಡಗಿಕೊಂಡಿರುವ ಸಮ್ಯಕ್ತ್.ಜೈನ್ ತುಳು ಮತ್ತು ಕನ್ನಡ ಭಾಷೆಗಳಲ್ಲಿ ಸಾಹಿತ್ಯ ರಚಿಸಿ ಎಲ್ಲರಿಗೂ ಚಿರಪರಿಚಿತರಾಗಿದ್ದಾರೆ.ಲಾಕ್ ಡೌನ್ ಸಮಯದಲ್ಲಿ ಹೆಚ್ಚು ಆನ್ ಲೈನ್ ಸ್ಪರ್ಧೆಯಲ್ಲಿ ಭಾಗವಹಿಸಿದ್ದರು.