




ಪುತ್ತೂರು: ಶಾಂತಿಗೋಡು ಬಿಲ್ಲವ ಗ್ರಾಮ ಸಮಿತಿ ಇದರ ಆಶ್ರಯದಲ್ಲಿ ೫ನೇ ವರ್ಷದ ಗುರುಪೂಜಾ ಮತ್ತು ಭಜನಾ ಕಾರ್ಯಕ್ರಮ ಹಾಗೂ ಸನ್ಮಾನ ಮತ್ತು ಧಾರ್ಮಿಕ ಸಭಾ ಕಾರ್ಯಕ್ರಮವು ಮಾ.೨೧ ರಂದು ಬೆಳಿಗ್ಗೆ ಕಲ್ಲರ್ಪೆ ತರವಾಡು ಮನೆ ವಠಾರದಲ್ಲಿ ಜರಗಲಿದೆ.
ಕಾರ್ಯಕ್ರಮದ ಉದ್ಘಾಟನೆಯನ್ನು ಕಲ್ಲರ್ಪೆ ಕುಟುಂಬದ ಹಿರಿಯರಾದ ಎಲ್ಯಣ್ಣ ಪೂಜಾರಿ ಮುಂಡೋಡಿರವರು ನೆರವೇರಿಸಲಿದ್ದಾರೆ.
ಅಧ್ಯಕ್ಷತೆಯನ್ನು ಶಾಂತಿಗೋಡು ಬಿಲ್ಲವ ಗ್ರಾಮ ಸಮಿತಿ ಅಧ್ಯಕ್ಷ ಹೊನ್ನಪ್ಪ ಪೂಜಾರಿ ಕೈಂದಾಡಿರವರು ವಹಿಸಲಿದ್ದಾರೆ. ಸನ್ಮಾನಿತರನ್ನು ಪುತ್ತೂರು ಬಿಲ್ಲವ ಸಂಘದ ಅಧ್ಯಕ್ಷ ಜಯಂತ್ ನಡುಬೈಲುರವರು ಸನ್ಮಾನಿಸಲಿದ್ದಾರೆ. ಜಿಲ್ಲಾ ಅತ್ತ್ಯುತ್ತಮ ಶಿಕ್ಷಕ ಪ್ರಶಸ್ತಿ ಪುರಸ್ಕೃತರಾದ ಕಡಬ ಸರಕಾರಿ ಪದವಿ ಪೂರ್ವ ಕಾಲೇಜಿನ ಪ್ರಶಾಂತ್ ಅನಂತಾಡಿರವರು ಗುರು ಸಂದೇಶ ನೀಡಲಿದ್ದಾರೆ. ಮಂಗಳೂರು ಕದ್ರಿಹಿಲ್ಸ್ ಸರಕಾರಿ ಕೈಗಾರಿಕಾ ತರಬೇತಿ ಸಂಸ್ಥೆಯ ತರಬೇತಿ ಅಧಿಕಾರಿ ಯೋಗೀಶ್ ಪಿ.ನಾಯ್ಕರವರು ಬಹುಮಾನ ವಿತರಣೆಯನ್ನು ನೆರವೇರಿಸಲಿದ್ದಾರೆ. ಮುಖ್ಯ ಅತಿಥಿಗಳಾಗಿ ಕಿನ್ನಿಮಜಲು ಬ್ರಹ್ಮಬೈದರ್ಕಳ ಗರಡಿಯ ಅಧ್ಯಕ್ಷ ಶಶಿಧರ್ ಕಿನ್ನಿಮಜಲು, ಪುತ್ತೂರು ಬಿಲ್ಲವ ಸಂಘದ ಗುರುಮಂದಿರದ ಕಾರ್ಯನಿರ್ವಹಣಾಧಿಕಾರಿ ಆರ್.ಸಿ ನಾರಾಯಣ, ನರಿಮೊಗರು ಸಿಎ ಬ್ಯಾಂಕಿನ ನಿರ್ದೇಶಕಿ ನಾಗಮ್ಮ ಬಾಲಕೃಷ್ಣ ಗೌಡ, ಪುತ್ತೂರು ಬಿಲ್ಲವ ಮಹಿಳಾ ವೇದಿಕೆಯ ಅಧ್ಯಕ್ಷೆ ವಿನಯ ವಸಂತ್, ಪುತ್ತೂರು ಯುವವಾಹಿನಿ ಘಟಕದ ಅಧ್ಯಕ್ಷ ಬಾಬು ಪೂಜಾರಿ ಇದ್ಪಾಡಿ, ನರಿಮೊಗರು ವಲಯ ಸಂಚಾಲಕ ನಾರಾಯಣ ಪೂಜಾರಿ ಬೇರಿಕೆರವರು ಭಾಗವಹಿಸಲಿದ್ದಾರೆ ಎಂದು ಶಾಂತಿಗೋಡು ಬಿಲ್ಲವ ಗ್ರಾಮ ಸಮಿತಿ ಅಧ್ಯಕ್ಷ ಹೊನ್ನಪ್ಪ ಪೂಜಾರಿ ಕೈಂದಾಡಿ, ಶಾಂತಿಗೋಡು ಯುವವಾಹಿನಿ ಗ್ರಾಮ ಸಮಿತಿಯ ಅಧ್ಯಕ್ಷ ಲೋಹಿತ್ ಕಲ್ಕಾರು, ಶಾಂತಿಗೋಡು ಬಿಲ್ಲವ ಮಹಿಳಾ ವೇದಿಕೆ ಅಧ್ಯಕ್ಷೆ ಶಶಿಕಲಾ ನಾರಾಯಣ ಬೇರಿಕೆ, ಶಾಂತಿಗೋಡು ವಿದ್ಯಾರ್ಥಿ ಸಂಘದ ಅಧ್ಯಕ್ಷ ಶ್ರಾವಣ್ ಎ.ಶಾಂತಿಗೋಡುರವರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

ಮಾ.೨೦ ರಂದು ಅಪರಾಹ್ನ ಶಾಂತಿಗೋಡು ಗ್ರಾಮ ಸಮಿತಿಯ ವ್ಯಾಪ್ತಿಗೊಳಪಟ್ಟ ಪುರುಷರಿಗೆ, ಮಹಿಳೆಯರಿಗೆ ವಿವಿಧ ಮುಕ್ತ ಸ್ಪರ್ಧೆಗಳು ಮತ್ತು ೧ರಿಂದ ೪, ೫ರಿಂದ ೭ ಮತ್ತು ೮ರಿಂದ ೧೦ನೇ ತರಗತಿಯ ವಿದ್ಯಾರ್ಥಿಗಳಿಗೆ ಭಾಷಣ ಮತ್ತು ಕ್ರೀಡಾ ಸ್ಪರ್ಧೆಗಳನ್ನು ಏರ್ಪಡಿಸಲಾಗಿದೆ. ಪುತ್ತೂರು ಶ್ರೀ ಮಹಾಲಿಂಗೇಶ್ವರ ಐಟಿಐ ಇದರ ಅಧ್ಯಾಪಕರಾದ ನಾರಾಯಣ ಪೂಜಾರಿರವರು ಉದ್ಘಾಟನೆಯನ್ನು ನೆರವೇರಿಸಲಿದ್ದಾರೆ. ಶಾಂತಿಗೋಡು ಬಿಲ್ಲವ ಗ್ರಾಮ ಸಮಿತಿಯ ಅಧ್ಯಕ್ಷ ಹೊನ್ನಪ್ಪ ಪೂಜಾರಿ ಕೈಂದಾಡಿರವರು ಅಧ್ಯಕ್ಷತೆ ವಹಿಸಲಿದ್ದು, ಮುಖ್ಯ ಅತಿಥಿಗಳಾಗಿ ಕುಂಬ್ರ ಮೂರ್ತೆದಾರರ ಸೇವಾ ಸಹಕಾರಿ ಸಂಘದ ಕಾರ್ಯ ನಿರ್ವಹಣಾಧಿಕಾರಿ ಚಂದ್ರಕಾಂತ ಶಾಂತಿವನ, ಶಾಂತಿಗೋಡು ಸರಕಾರಿ ಹಿರಿಯ ಪ್ರಾಥಮಿಕ ಶಾಲೆಯ ಶಿಕ್ಷಕಿ ಸರೋಜರವರು ಭಾಗವಹಿಸಲಿದ್ದಾರೆ.