




ಕಡಬ ಟೈಮ್ಸ್, ಮಂಗಳೂರು: ಬೈಕೊಂದು ಸ್ಕೂಟಿಗೆ ಹಿಂದಿನಿಂದ ಢಿಕ್ಕಿ ಹೊಡೆದ ಪರಿಣಾಮ ಬೈಕ್ ಸವಾರ ಕಡಬದ ಯುವಕ ಗಂಭೀರ ಗಾಯಗೊಂಡ ಘಟನೆ ಮಂಗಳೂರಿನ ಉಳ್ಳಾಲ ನೇತ್ರಾವತಿ ಸೇತುವೆಯಲ್ಲಿ ಸೋಮವಾರ ರಾತ್ರಿ ನಡೆದಿದೆ.
ಗಂಭೀರ ಗಾಯಗೊಂಡು ಆಸ್ಪತ್ರೆಗೆ ದಾಖಲಾಗಿದ್ದ ಸವಾರ ಸಾವನ್ನೊಪ್ಪಿದ್ದಾರೆ. ಯುವಕನನ್ನು ಕಡಬ ತಾಲೂಕಿನ ಮರ್ಧಾಳ ಸಮೀಪದ ಕೆರ್ಮಾಯಿ ನಿವಾಸಿ ಸನು ಅಬ್ರಹಾಂ (21) ಎಂದು ಗುರುತಿಸಲಾಗಿದೆ.

ಸನು ಅಬ್ರಹಾಂ ಚಲಾಯಿಸುತ್ತಿದ್ದ ಯಮಹಾ ಯಂಟಿ ಬೈಕ್ ದ್ವಿಚಕ್ರ ವಾಹನಕ್ಕೆ ಹಿಂದಿನಿಂದ ಢಿಕ್ಕಿ ಹೊಡೆದಿತ್ತು.