




ಕಡಬ ಟೈಮ್ಸ್, ಪಟ್ಟಣ ಸುದ್ದಿ: ಕಡಬ ಪೇಟೆಯುದ್ದಕ್ಕೂ ನೀರು ಸರಬರಾಜು ಮಾಡುತ್ತಿರುವ ಬೃಹತ್ ನೀರಿನ ಟ್ಯಾಂಕ್ ನ ಕಂಬಗಳು ಬಿರುಕುಬಿಟ್ಟಿದ್ದು ಕುಸಿಯುವ ಭೀತಿ ಎದುರಾಗಿದೆ.
ಆಕಸ್ಮಿಕವಾಗಿ ನೀರಿನ ಟ್ಯಾಂಕ್ ಕುಸಿದು ಬಿದ್ದರೆ ಗ್ರಾಮ ಕರಣಿಕರ ಕಚೇರಿ, ಪಟ್ಟಣ ಪಂಚಾಯಿತಿ ಸೇರಿದಂತೆ ಪ್ರಮುಖ ವಾಣಿಜ್ಯ ಕಟ್ಟಡಗಳಿಗೂ ಹಾನಿಯಾಗುವ ಸಂಭವ ಹೆಚ್ಚಿದೆ. ಅಲ್ಲದೆ ಪ್ರಾಣ ಹಾನಿಯೂ ಆಗುವ ಭೀತಿಯೂ ಇದೆ. ಟ್ಯಾಂಕ್ನ ಕಂಬಗಳು ಬಿರುಕು ಬಿಟ್ಟಿದ್ದರೂ ಅಧಿಕಾರಿಗಳು ಈ ಬಗ್ಗೆ ಕ್ರಮ ಕೈಗೊಳ್ಳುತ್ತಿಲ್ಲ ಎಂಬ ಆರೋಪಗಳು ಸಾರ್ವಜನಿಕ ವಲಯದಿಂದ ಕೇಳಿ ಬರುತ್ತಿದೆ. ಟ್ಯಾಂಕ್ನ ಅರ್ಧದಷ್ಟು ಭಾಗ ಕೆಸರು, ಗಲೀಜು ತುಂಬಿಕೊಂಡಿದೆ ,ಅಲ್ಲದೆ ಸರಿಯಾಗಿ ನಿರ್ವಹಣೆಯೂ ಆಗುತ್ತಿಲ್ಲ ಎಂಬ ಮಾತು ಕೇಳಿಬರುತ್ತಿದೆ.

ಈ ಬೃಹತ್ ನೀರಿನ ಟ್ಯಾಂಕ್ 1977-78ನೇ ಇಸವಿಯಲ್ಲಿ ಅಂದಿನ ಗ್ರಾ.ಪಂ ಅಧ್ಯಕ್ಷರಾಗಿದ್ದ ಸಯ್ಯದ್ ಮೀರಾ ಸಾಹೇಬ್ ಅವರ ಅವಧಿಯಲ್ಲಿ ನಿರ್ಮಾಣಗೊಂಡಿತ್ತು. ಅಂದಿನ ಇಂಜಿನಿಯರ್ ಸಿ.ಎಂ.ಪಾಲಾಕ್ಷ ರವರ ಮೇಲುಸ್ತುವಾರಿಯಲ್ಲಿ 1979ರಲ್ಲಿ ಉದ್ಘಾಟನೆಗೊಂಡಿತ್ತು.