ಉಪ್ಪಿನಂಗಡಿ: ಕಾರು - ಬೈಕ್ ನಡುವೆ ಢಿಕ್ಕಿ|ಅಪಘಾತದ ತೀವ್ರತೆಗೆ ಬೈಕ್ ನಲ್ಲಿ ಪ್ರಯಾಣಿಸುತ್ತಿದ್ದ ಇಬ್ಬರ ಕಾಲುಗಳು ಮುರಿದು ರಸ್ತೆ ಪಕ್ಕ ಬಿತ್ತು

ಉಪ್ಪಿನಂಗಡಿ: ಕಾರು - ಬೈಕ್ ನಡುವೆ ಢಿಕ್ಕಿ|ಅಪಘಾತದ ತೀವ್ರತೆಗೆ ಬೈಕ್ ನಲ್ಲಿ ಪ್ರಯಾಣಿಸುತ್ತಿದ್ದ ಇಬ್ಬರ ಕಾಲುಗಳು ಮುರಿದು ರಸ್ತೆ ಪಕ್ಕ ಬಿತ್ತು

Kadaba Times News

ಕಡಬ ಟೈಮ್ಸ್, ಉಪ್ಪಿನಂಗಡಿ: ಬೈಕ್ ಮತ್ತು ಕಾರಿನ ನಡುವೆ ಸಂಭವಿಸಿದ ಭೀಕರ ಅಪಘಾತದಲ್ಲಿ ಮೂವರು ಗಂಭೀರವಾಗಿ ಗಾಯಗೊಂಡ ಘಟನೆ ಉಪ್ಪಿನಂಗಡಿ ಸಮೀಪ ಶನಿವಾರ ಬೆಳಗ್ಗೆ ನಡೆದಿದೆ.

ಬಜತ್ತೂರು ಗ್ರಾಮದ ಕಾಂಚನ ಕ್ರಾಸ್ ಬಳಿ ಈ ಅಪಘಾತ ಸಂಭವಿಸಿದೆ.ಬೈಕ್ ನಲ್ಲಿ ಪ್ರಯಾಣಿಸುತಿದ್ದ ಮೂವರು ಗಂಭೀರವಾಗಿ ಗಾಯಗೊಂಡವರು. ಈ ಮೂವರು ಬೈಕ್ ನಲ್ಲಿ ಉಪ್ಪಿನಂಗಡಿಯಿಂದ ನೆಲ್ಯಾಡಿ ಕಡೆಗೆ ಸಂಚರಿಸುತ್ತಿದ್ದರು.ಗಾಯಗೊಂಡವರನ್ನು ಸುಧಾಕರ್, ಲೋಕಯ್ಯ, ರವಿ ಎಂದು ಗುರುತಿಸಲಾಗಿದೆ. ಗಾಯಗೊಂಡ ಮೂವರನ್ನೂ ಮಂಗಳೂರು ಖಾಸಗಿ ಆಸ್ಪತ್ರೆಗೆ ಕರೆದೊಯ್ಯಲಾಗಿದೆ.

ಬೆಂಗಳೂರಿನಿಂದ ಮಂಗಳೂರು ಕಡೆಗೆ ಸಾಗುತ್ತಿದ್ದ ಕಾರು ಎದುರಿನಿಂದ ಬರುತಿದ್ದ ಬೈಕ್ ಗೆ ಕಾಂಚನ ಕ್ರಾಸ್ ಬಳಿ ಸಣ್ಣಂಪಾಡಿ ಎಂಬಲ್ಲಿ ಢಿಕ್ಕಿ ಹೊಡೆದಿದೆ.

ಅಪಘಾತದ ರಭಸಕ್ಕೆ ಕಾರಿನ ಮುಂಭಾಗ ಮತ್ತು ಬೈಕ್ ನಜ್ಜುಗುಜ್ಜಾಗಿದೆ. ಅಲ್ಲದೇ ಅಪಘಾತದ ತೀವ್ರತೆಗೆ ಬೈಕ್ ನಲ್ಲಿ ಪ್ರಯಾಣಿಸುತ್ತಿದ್ದ ಇಬ್ಬರ ಕಾಲುಗಳು ಮುರಿದು ರಕ್ತದ ಕೋಡಿ ಹರಿದಿದೆ. ಮುರಿದ ಕಾಲುಗಳು ಅಪಘಾತದ ಸ್ಥಳದಲ್ಲಿ ಅಲ್ಲಲ್ಲಿ ಬಿದ್ದುಕೊಂಡಿದ್ದು ಅಪಘಾತದ ಭೀಕರತೆಗೆ ಸಾಕ್ಷಿಯಾಗಿದೆ. .ಪುತ್ತೂರು ಸಂಚಾರ ಠಾಣಾ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ.

#buttons=(Ok, Go it!) #days=(20)

Our website uses cookies to enhance your experience. Learn More
Ok, Go it!
To Top