ನೆಲ್ಯಾಡಿ:ಖಾಸಗಿ ಬಸ್ -ಕಂಟೈನರ್ ಲಾರಿ ಢಿಕ್ಕಿ| ವಾಹನಗಳೆರಡೂ ಭಸ್ಮ| ಲಾರಿ ಚಾಲಕ ಹೊರಬರಲಾಗದೆ ಸಜೀವ ದಹನ

ನೆಲ್ಯಾಡಿ:ಖಾಸಗಿ ಬಸ್ -ಕಂಟೈನರ್ ಲಾರಿ ಢಿಕ್ಕಿ| ವಾಹನಗಳೆರಡೂ ಭಸ್ಮ| ಲಾರಿ ಚಾಲಕ ಹೊರಬರಲಾಗದೆ ಸಜೀವ ದಹನ

Kadaba Times News

ಕಡಬ ಟೈಮ್ಸ್, ನೆಲ್ಯಾಡಿ : ಬೆಂಗಳೂರು- ಮಂಗಳೂರು ರಾಷ್ಟ್ರೀಯ ಹೆದ್ದಾರಿಯ ನೆಲ್ಯಾಡಿಯಲ್ಲಿ ಕಂಟೈನರ್ ಲಾರಿ ಮತ್ರು ಖಾಸಗಿ ಬಸ್ಸು ನಡುವೆ ಡಿಕ್ಕಿ ಸಂಭವಿಸಿದೆ.

ಡಿಕ್ಕಿಯ ರಭಸಕ್ಕೆ ಎರಡೂ ವಾಹನಗಳು ಬೆಂಕಿಗಾಹುತಿಯಾಗಿ ಲಾರಿ ಚಾಲಕ ಸಜೀವ ದಹನಗೊಂಡ ಘಟನೆ ಮಾ.24 ರ ತಡರಾತ್ರಿ ಸಂಭವಿಸಿದೆ.ಬೆಂಗಳೂರು ಕಡೆಗೆ ಚಲಿಸುತ್ತಿದ್ದ ಖಾಸಗಿ ಬಸ್ಸು ಮತ್ತು ಬೆಂಗಳೂರಿನಿಂದ ಮಂಗಳೂರು ಕಡೆಗೆ ತೆರಳುತ್ತಿದ್ದ ಕಂಟೈನರ್ ಮುಖಾಮುಖಿ ಡಿಕ್ಕಿ ಹೊಡೆದು ಈ ದುರ್ಘಟನೆ ಸಂಭವಿಸಿದೆ.

ಬಸ್ಸಿನಲ್ಲಿದ್ದ ಪ್ರಯಾಣಿಕರು ಅಪಾಯವನ್ನರಿತು ಕೆಳಗಿಳಿದು ಪಾರಾಗಿದ್ದಾರೆ. ಬೆಂಕಿಯ ತೀವ್ರತೆ ಹೆಚ್ಚಾಗಿ ಎರಡೂ ವಾಹನಗಳು ಸುಟ್ಟು ಭಸ್ಮವಾಗಿದ್ದು, ಲಾರಿ ಚಾಲಕ ಮಾತ್ರ ಲಾರಿ ಯೊಳಗೆ ಸಿಲುಕಿ ಹೊರಬರಲಾಗದೆ ಸಜೀವ ದಹನವಾಗಿರುವುದಾಗಿ ಮಾಹಿತಿ ಲಭಿಸಿದೆ. ಅಗ್ನಿಶಾಮಕ ದಳ ಮತ್ತು ಪೊಲೀಸರು ಭೇಟಿ ನೀಡಿ ಬೆಂಕಿ ನಂದಿಸಿದ್ದಾರೆ.

#buttons=(Ok, Go it!) #days=(20)

Our website uses cookies to enhance your experience. Learn More
Ok, Go it!
To Top