






ಕಡಬ ಟೈಮ್ಸ್, ಪಟ್ಟಣ ಸುದ್ದಿ : ಅರಣ್ಯಾಧಿಕಾರಿಗಳ ದೌರ್ಜನ್ಯ ದ ವಿರುದ್ದ ಪ್ರಕರಣ ದಾಖಲಿಸಿ ತನಿಖೆ ನಡೆಸುವಂತೆ ಆಗ್ರಹಿಸಿ ನಡೆಯುತ್ತಿರುವ ಉಪವಾಸ ಸತ್ಯಾಗ್ರಹ ಐದನೇ ದಿನ ಮುಂದುವರೆದಿದೆ.
ರಕ್ತ ಚಳುವಳಿ ಹೆಸರಿನಲ್ಲಿ ಮೊದಲು ನೀತಿ ತಂಡದ ರಾಜ್ಯಾಧ್ಯಕ್ಷ ಜಯಂತ್ ಟಿ ಅವರು ಬ್ಲೇಡ್ ಮೂಲಕ ಬೆರಳಿನ ತುದಿ ಕಟ್ ಮಾಡಿ ಆ ರಕ್ತದಲ್ಲಿ “ FIR ದಾಖಲಿಸಿ ನ್ಯಾಯಕೊಡಿ ,ಅಧಿಕಾರಿಯವರೆ ನಮ್ಮನ್ನು ಬಲಿಕೊಡದಿರಿ” ಎಂದು ಬರೆದುಕೊಂಡಿದ್ದಾರೆ.
ಈ ಸುದ್ದಿಯನ್ನೂ ಓದಿರಿ: ಕಡಬ :ಐದನೇ ದಿನಕ್ಕೆ ಕಾಲಿಟ್ಟ ಉಪವಾಸ ಸತ್ಯಾಗ್ರಹ |ಶಾಂತಿಯುತ ಪ್ರತಿಭಟನೆ ರಕ್ತ ಚಳುವಳಿಯಾಗಿ ಮಾರ್ಪಾಡು

ಅಧಿಕಾರಿಗಳ ಮೇಲೆ ಕೇಸು ದಾಖಲಿಸಿ ಇಲ್ಲವೇ ಕೇಸು ದಾಖಲಿಸಲು ಸಾಧ್ಯವಿಲ್ಲ ಎಂದು ಲಿಖಿತವಾಗಿ ಬರೆದುಕೊಡಿ ಎಂದು ಅಧಿಕಾರಿಗಳ ಮುಂದೆ ಬೇಡಿಕೆ ಸಲ್ಲಿಸಿದ್ದಾರೆ. ಈ ಬಗ್ಗೆ ಸ್ಪಷ್ಟ ನಿಲುವನ್ನು ಜಿಲ್ಲಾಡಳಿತ ನೀಡದ ಹಿನ್ನೆಲೆಯಲ್ಲಿ ಈ ಧರಣಿ ಮುಂದುವರೆದಿದೆ.ಉನ್ನತ ಅರಣ್ಯ ಅಧಿಕಾರಿಗಳು ಹೋರಾಟಗಾರರ ಪೋನ್ ಸ್ವೀಕರಿಸದೆ ಇರುವುದು ಹಲವು ಅನುಮಾನಕ್ಕೆ ಕಾರಣವಾಗಿದೆ.
ಈ ಸುದ್ದಿಯನ್ನು ಓದಿರಿ: ಕಡಬ : ಉಪವಾಸ ಸತ್ಯಾಗ್ರಹ ಮೂರನೇ ದಿನಕ್ಕೆ | ಧರಣಿ ನಿರತ ಇಬ್ಬರು ಅಸ್ವಸ್ಥಗೊಂಡು ಆಸ್ಪತ್ರೆಗೆ ದಾಖಲು