ಸುಳ್ಯ ವಿಧಾನ ಸಭಾ ಕ್ಷೇತ್ರ: ಎಣ್ಮೂರು ಗ್ರಾಮದಲ್ಲಿ ಸೇತುವೆ ಉದ್ಘಾಟಿಸಿದ ಸಚಿವ ಎಸ್.ಅಂಗಾರ

ಸುಳ್ಯ ವಿಧಾನ ಸಭಾ ಕ್ಷೇತ್ರ: ಎಣ್ಮೂರು ಗ್ರಾಮದಲ್ಲಿ ಸೇತುವೆ ಉದ್ಘಾಟಿಸಿದ ಸಚಿವ ಎಸ್.ಅಂಗಾರ

Kadaba Times News

ಕಡಬ ಟೈಮ್ಸ್(KADABA TIMES):ಸುಳ್ಯ ವಿಧಾನಸಭಾ ಕ್ಷೇತ್ರದ ಎಣ್ಮೂರು ಗ್ರಾಮದ ಕಲ್ಲೇರಿಯಲ್ಲಿ ನೂತನವಾಗಿ ನಿರ್ಮಿಸಲಾಗಿರುವ ನೂತನ ಸೇತುವೆಯನ್ನು  ಸಚಿವ ಎಸ್. ಅಂಗಾರ ಇಂದು ಉದ್ಘಾಟಿಸಿದರು.

ಈ ಸಂದರ್ಭದಲ್ಲಿ ಸುಳ್ಯ ವಿಧಾನಸಭಾ ಕ್ಷೇತ್ರದ ಭಾರತೀಯ ಜನತಾ ಪಕ್ಷದ ಅಧ್ಯಕ್ಷ ಹರೀಶ್ ಕಂಜಿಪಿಲಿ, ಪ್ರಧಾನ ಕಾರ್ಯದರ್ಶಿ ರಾಕೇಶ್ ರೈ ಕೆಡೆಂಜಿ, ಬೆಳ್ಳಾರೆ ಮಹಾಶಕ್ತಿ ಕೇಂದ್ರದ ಅಧ್ಯಕ್ಷ ವಸಂತ ನಡುಬೈಲು, ಎಡಮಂಗಲ ಗ್ರಾ.ಪಂ. ಉಪಾಧ್ಯಕ್ಷೆ ರೇವತಿ ಎಣ್ಮೂರು, ಸದಸ್ಯರಾದ ದಿವ್ಯಾ ಯೋಗಾನಂದ, ಸವಿತಾ ಕಲ್ಲೇರಿ, ಪ್ರಮುಖರಾದ ಲಕ್ಷ್ಮಿನಾರಾಯಣ ನಡ್ಕ, ಯೋಗಾನಂದ ಉಳ್ಳಲಾಡಿ , ಭಾಗೀರಥಿ ಮುರುಳ್ಯ, ವಸಂತ ರೈ ಕಲ್ಲೇರಿ, ಮೋಹನದಾಸ್ ರೈ ಬಲ್ಕಾಡಿ ಮತ್ತಿತರರು ಉಪಸ್ಥಿತರಿದ್ದರು.

ಕಾರ್ತಿಕ್ ರೈ ಕಲ್ಲೇರಿ ಸ್ವಾಗತಿಸಿ, ವಂದಿಸಿದರು.

#buttons=(Ok, Go it!) #days=(20)

Our website uses cookies to enhance your experience. Learn More
Ok, Go it!
To Top