




ಕಡಬ ಟೈಮ್ಸ್(KADABA TIMES):ಹಿಜಾಬ್ನಿಂದ ಸುದ್ದಿಯಾಗಿದ್ದ ಮಂಗಳೂರು ನಗರದ ಹಂಪನಕಟ್ಟೆಯಲ್ಲಿರುವ ವಿವಿ ಕಾಲೇಜಿನ ತರಗತಿಯೊಂದರಲ್ಲಿ ವಿನಾಯಕ ದಾಮೋದರ ಸಾವರ್ಕರ್ ಭಾವ ಚಿತ್ರ ಅಳವಡಿಸಲಾಗಿದೆ.
ಭಾರತಾಂಬೆಯ ಪೋಟೋದೊಂದಿಗೆ ತರಗತಿಯ ಗೋಡೆಯಲ್ಲಿ ಅಂಟಿಸಲಾಗಿದೆ. ಈ ವೀಡಿಯೋವನ್ನು ವಿದ್ಯಾರ್ಥಿಗಳೇ ಚಿತ್ರೀಕರಿಸಿದ್ದು, ನಂತರ ಸಾಮಾಜಿಕ ಜಾಲತಾಣದಲ್ಲಿ ಹರಿಯಬಿಟ್ಟಿದ್ದಾರೆ. ಸದ್ಯ ಈ ವೀಡಿಯೋ ವೈರಲ್ ಆಗಿದೆ.

ವಿಷಯ ಪ್ರಾಂಶುಪಾಲೆ ಡಾ.ಅನಸೂಯ ರೈ ಗಮನಕ್ಕೆ ಬರುತ್ತಿದ್ದಂತೆ ಸಾವರ್ಕರ್ ಚಿತ್ರಚನ್ನು ತೆರವುಗೊಳಿಸಲಾಗಿದೆ ಎಂದು ತಿಳಿದು ಬಂದಿದೆ.