ರಕ್ಷಿತ್‌ ಶೆಟ್ಟಿ ಅಭಿಯನದ ಸಿನೆಮಾ ಸ್ಪೂರ್ತಿ: ಶ್ವಾನದಳದ ನಾಯಿ ಮರಿಗೆ ಚಾರ್ಲಿ ಹೆಸರಿಟ್ಟ ಪೊಲೀಸರು

ರಕ್ಷಿತ್‌ ಶೆಟ್ಟಿ ಅಭಿಯನದ ಸಿನೆಮಾ ಸ್ಪೂರ್ತಿ: ಶ್ವಾನದಳದ ನಾಯಿ ಮರಿಗೆ ಚಾರ್ಲಿ ಹೆಸರಿಟ್ಟ ಪೊಲೀಸರು

Kadaba Times News

ಕಡಬ ಟೈಮ್ಸ್(KADABA TIMES):ಮಂಗಳೂರು ನಗರದ ಪೊಲೀಸರು ಶ್ವಾನ ದಳದ ಹೊಸ ಸದಸ್ಯನಾಗಿರುವ ಲ್ಯಾಬ್ರಡಾರ್‌ ತಳಿಯ ನಾಯಿಮರಿಗೆ ‘ಚಾರ್ಲಿ’ ಎಂದು ಶುಕ್ರವಾರ ನಾಮಕರಣ ಮಾಡಿದ್ದಾರೆ.

ಕಿರಣ್‌ ರಾಜ್‌ ನಿರ್ದೇಶನದ, ನಟ ರಕ್ಷಿತ್‌ ಶೆಟ್ಟಿ ಅಭಿಯನದ ‘ಚಾರ್ಲಿ 777’ ಸಿನಿಮಾದಲ್ಲಿ ಮನುಷ್ಯ ಹಾಗೂ ನಾಯಿಯ ನಡುವಿನ ಒಡನಾಟದಿಂದ ಸ್ರ್ಪೂರ್ತಿ ಪಡೆದು ಈ ಹೆಸರನ್ನು ಇಡಲಾಗಿದೆ.

ನಗರ ಪೊಲೀಸ್‌ ಕಮಿಷನರ್‌ ಅವರ ಕಚೇರಿ ಬಳಿ ನಾಯಿಮರಿಗೆ ಹೆಸರಿಡಲು ಮಾಡಲು ಪುಟ್ಟ ಸಮಾರಂಭವನ್ನೂ ಆಯೋಜಿಸಲಾಗಿತ್ತು. ಮೂರು ತಿಂಗಳ ಅಂದರೆ ಕಳೆದ ಮಾರ್ಚ್ ನಲ್ಲಿ ಲ್ಯಾಬ್ರಡಾರ್‌ ರಿಟ್ರೀವರ್‌ ನಾಯಿ ಮರಿ ಇತ್ತೀಚೆಗಷ್ಟೇ ಪೊಲೀಸ್‌ ಶ್ವಾನದಳಕ್ಕೆ ಸೇರ್ಪಡೆಯಾಗಿತ್ತು.

ಬಂಟ್ವಾಳದ ಮಾಲೀಕರೊಬ್ಬರಿಂದ ಈ ನಾಯಿಮರಿಯನ್ನು ಶ್ವಾನ ಪಡೆಗಾಗಿ ಖರೀದಿಸಲಾಗಿತ್ತು. ಮುಂದಿನ ನಾಲ್ಕು ತಿಂಗಳ ಬಳಿಕ ಬೆಂಗಳೂರಿನ ಸೌತ್ ಸಿ ಆರ್ ನಲ್ಲಿ ಆರು ತಿಂಗಳ ಕಾಲ ಈ ಶ್ವಾನಕ್ಕೆ ತರಬೇತಿ ನೀಡಲು ನಿರ್ಧರಿಸಲಾಗಿದೆ. .

#buttons=(Ok, Go it!) #days=(20)

Our website uses cookies to enhance your experience. Learn More
Ok, Go it!
To Top