ನಮ್ಮೂರಿನಲ್ಲಿ ಡಿ.ವಿ ಸದಾನಂದ ಗೌಡ ಅಂತ ಒಬ್ರು ಇದ್ರು, ಈಗ ಅವರು ಭೂಮಿ ಮೇಲೆ ಇದ್ದಾರಾ?-ಸೋಷಿಯಲ್ ಮೀಡಿಯಾದಲ್ಲಿ ಪೋಸ್ಟ್ ವೈರಲ್

ನಮ್ಮೂರಿನಲ್ಲಿ ಡಿ.ವಿ ಸದಾನಂದ ಗೌಡ ಅಂತ ಒಬ್ರು ಇದ್ರು, ಈಗ ಅವರು ಭೂಮಿ ಮೇಲೆ ಇದ್ದಾರಾ?-ಸೋಷಿಯಲ್ ಮೀಡಿಯಾದಲ್ಲಿ ಪೋಸ್ಟ್ ವೈರಲ್

Kadaba Times News

ಕಡಬ ಟೈಮ್ಸ್(KADABA TIMES):ಸುಳ್ಯ ವಿಧಾನ ಸಭಾ ಕ್ಷೇತ್ರ:   ಕೆಲದಿನಗಳ ಹಿಂದೆಯಷ್ಟೇ  ಬಿಜೆಪಿ ಯುವ ಮುಖಂಡನ   ಹತ್ಯೆಯಾಗಿ ದ್ದು ಮೃತರ   ಮನೆಗೆ ರಾಜ್ಯದ ಮುಖ್ಯಮಂತ್ರಿಗಳು ಸೇರಿದಂತೆ ಸಚಿವರು, ಶಾಸಕರು ಹಾಗೂ ಕೆಲ ಸಂಘಟನೆಯ ಮುಖ್ಯಸ್ಥರು, ಕಾರ್ಯಕರ್ತರು ಬೇಟಿ ನೀಡಿ ಕುಟುಂಬಸ್ಥರಿಗೆ  ಸಾಂತ್ವನ ಹೇಳಿದ್ದರು . ಅದರೆ ಸುಳ್ಯದವರೇ ಆದ ಮಾಜಿ ಮುಖ್ಯಮಂತ್ರಿ, ಡಿ.ವಿ ಸದಾನಂದ ಗೌಡರು ಬಾರದೇ ಇರುವುದು ಕಾರ್ಯಕರ್ತರ‌ ಕೆಂಗಣ್ಣಿಗೆ ಗುರಿಯಾಗಿದೆ.

ಸುಳ್ಯ ತಾಲೂಕಿನ, ಮಂಡೆಕೋಲು ಗ್ರಾಮದ ದೇವರಗುಂಡದವರಾದ ಮಾಜಿ ಮುಖ್ಯ ಮಂತ್ರಿಯಾಗಿರುವ ಡಿ.ವಿ ಸದಾನಂದ ಗೌಡರು ಬಾರದೇ ಇರುವುದು ಮತ ನೀಡಿ ಗೆಲ್ಲಿಸಿದ ಕಾರ್ಯಕರ್ತರಲ್ಲಿ ಅಸಮಾಧಾನಕ್ಕೆ ಕಾರಣವಾಗಿದೆ.

ಈ ಕುರಿತು ಜಾಲತಾಣಗಳಲ್ಲಿ ಅಸಮಾದಾನ ವ್ಯಕ್ತಪಡಿಸಿರುವ ಪೋಸ್ಟರ್ ವೈರಲ್ ಆಗಿದೆ. “ ನಮ್ಮೂರಿನಲ್ಲಿ ಡಿ.ವಿ ಸದಾನಂದ ಗೌಡ ಅಂತ ಒಬ್ರು ಇದ್ರು,  ಈಗ ಅವರು ಭೂಮಿ ಮೇಲೆ ಇದ್ದಾರಾ ಯಾರಿಗಾದ್ರು ಗೊತ್ತಾ?  ಯಾಕಂದ್ರೆ ಅವರ ಊರಿನಲ್ಲೇ ಒಂದು ಕೊಲೆಯಾಗಿದೆ ತಿಳಿಸಬೇಕಿತ್ತು, ಅವರ ಫೋನ್ ನಂಬರ್ ಯಾರಲ್ಲಾದರೂ ಇದ್ರೆ  ಕೊಡಿ ನನಾದರು ಫೋನ್ ಮಾಡಿ ಹೇಳ್ತೇನೆ’ ಎನ್ನುವ ಬರವಣಿಗೆಯ  ಪೋಸ್ಟ್  ಜಾಲತಾಣಗಳಲ್ಲಿ ವೈರಲ್ ಅಗುತ್ತಿದೆ.

#buttons=(Ok, Go it!) #days=(20)

Our website uses cookies to enhance your experience. Learn More
Ok, Go it!
To Top