ಕಡಬ:ಕಾಣಿಯೂರು ಬಳಿ ಹೊಳೆಗೆ ಕಾರು ಬಿದ್ದ ಘಟನೆ: ಓರ್ವನ ಮೃತ ದೇಹ ಪತ್ತೆ

ಕಡಬ:ಕಾಣಿಯೂರು ಬಳಿ ಹೊಳೆಗೆ ಕಾರು ಬಿದ್ದ ಘಟನೆ: ಓರ್ವನ ಮೃತ ದೇಹ ಪತ್ತೆ

Kadaba Times News

ಕಡಬ ಟೈಮ್ಸ್(KADABA TIMES):ಕಡಬ: ಕಾಣಿಯೂರು ಸಮೀಪದ  ಬೈತ್ತಡ್ಕ ಹೊಳೆಗೆ ಕಾರು ಬಿದ್ದ ಪ್ರಕರಣಕ್ಕೆ ಸಂಬಂಧಿಸಿ ಬೈತ್ತಡ್ಕದಿಂದ 200 ಮೀಟರ್ ದೂರ ಮರಕ್ಕಡ ಹೊಳೆಯಲ್ಲಿ ಓರ್ವನ ಮೃತ ದೇಹ ಪತ್ತೆಯಾಗಿದೆ.

ಮೃತ ದೇಹವು ಹೊಳೆಯ ಬದಿಯಲ್ಲಿದ್ದ ಮರದ ದಿಮ್ಮಿಯಲ್ಲಿ ಪತ್ತೆಯಾಗಿದೆ. ಹೊಳೆಯಲ್ಲಿ ನೀರು ಕಡಿಮೆಯಾದ ಹಿನ್ನಲೆಯಲ್ಲಿ ಮೃತ ದೇಹ ಬೆಳಕಿಗೆ ಬಂದಿದೆ.

ಈ ಸುದ್ದಿಯನ್ನೂ ಓದಿರಿ:ಸಾಯಂಕಾಲದ ಸುದ್ದಿ: ಸುಳ್ಯದಲ್ಲಿ ಮತ್ತೆ ಕಂಪಿಸಿದ ಭೂಮಿ

ಬೈತಡ್ಕ ಮಸೀದಿಯ ಬಳಿಯಿರುವ ಸೇತುವೆಯಿಂದ ಕಾರೊಂದು ಹೊಳೆಗೆ ಬಿದ್ದು ಯುವಕರಿಬ್ಬರು ಕಣ್ಮರೆಯಾಗಿರುವ ಹಿನ್ನಲೆಯಲ್ಲಿ ಶೋಧ ಕಾರ್ಯ ನಡೆಯುತ್ತಿತ್ತು. ನಿನ್ನೆ  ಸ್ಥಳಕ್ಕೆ ಸಚಿವ ಎಸ್ ಅಂಗಾರ ಜು 11ರಂದು ಭೇಟಿ ನೀಡಿದ್ದರು.

#buttons=(Ok, Go it!) #days=(20)

Our website uses cookies to enhance your experience. Learn More
Ok, Go it!
To Top