ಹಳಿಯಲ್ಲಿ ನಡೆದುಕೊಂಡು ಹೋಗುತ್ತಿದ್ದ ವೇಳೆ ರೈಲು ಢಿಕ್ಕಿ:ಯುವಕ ಸ್ಥಳದಲ್ಲೇ ಸಾವು

ಹಳಿಯಲ್ಲಿ ನಡೆದುಕೊಂಡು ಹೋಗುತ್ತಿದ್ದ ವೇಳೆ ರೈಲು ಢಿಕ್ಕಿ:ಯುವಕ ಸ್ಥಳದಲ್ಲೇ ಸಾವು

Kadaba Times News

ಕಡಬ ಟೈಮ್ಸ್(KADABA TIMES):ಹಳಿಯಲ್ಲಿ ನಡೆದುಕೊಂಡು ಹೋಗುತ್ತಿದ್ದ ಯುವಕನಿಗೆ ರೈಲು ಢಿಕ್ಕಿ ಹೊಡೆದು ದಾರುಣವಾಗಿ ಸಾವನ್ನಪ್ಪಿದ ಘಟನೆ ಮಂಗಳೂರು ನಗರದ ಎಕ್ಕೂರು ಬಳಿ ಇಂದು ಬೆಳಗ್ಗೆ ಸಂಭವಿಸಿದೆ.

ಎಕ್ಕೂರಿನಲ್ಲಿ ಹಾದು ಹೋಗಿರುವ ರೈಲ್ವೇ ಹಳಿಯಲ್ಲಿ ಇಂದು ಬೆಳಗ್ಗೆ 10.45ರ ವೇಳೆಗೆ ಮುಂಬೈಗೆ ಸಂಚರಿಸುತ್ತಿದ್ದ ಮತ್ಸ್ಯಗಂಧ ಎಕ್ಸ್‌ಪ್ರೆಸ್‌ ರೈಲು ಈತನಿಗೆ ಢಿಕ್ಕಿ ಹೊಡೆದಿದೆ ಎನ್ನಲಾಗುತ್ತಿದೆ.

ಈ ಸುದ್ದಿ ಓದಿ:ಹತ್ಯೆಗೀಡಾದ ಬಿಜೆಪಿ ಯುವ ಮುಖಂಡನ  ಮನೆಗೆ ಸಂಸದ ಡಿ.ವಿ.ಸದಾನಂದ ಗೌಡ ಭೇಟಿ |ಪಕ್ಷದ ಕಚೇರಿಯಾದರೆ ಬೇಗ ಮಾಡುತ್ತಿರಲಿಲ್ಲವೇ?-ಮನೆಯವರ ಪ್ರಶ್ನೆ

ಕಿವಿಯಲ್ಲಿ ಇಯರ್ ಫೋನ್ ಇದ್ದು, ರೈಲು ಬರುವ ಸದ್ದು ಕೇಳದೆ ಅಪಘಾತವಾಗಿರುವ ನಡೆದಿರುವ ಘಟನೆ ಶಂಕೆ ವ್ಯಕ್ತವಾಗಿದೆ. ರೈಲ್ವೇ ಪೊಲೀಸರಿಂದ ಪ್ರಕರಣ ದಾಖಲಾಗಿದೆ.ಮೃತ ವ್ಯಕ್ತಿಯ ಕೊರಳಿನಲ್ಲಿ ಕ್ರೈಸ್ತರ ಜಪಮಾಲೆ ಕಂಡುಬಂದಿದೆ. ವ್ಯಕ್ತಿಯ ಗುರು ಪತ್ತೆಯಾಗಿಲ್ಲ.

#buttons=(Ok, Go it!) #days=(20)

Our website uses cookies to enhance your experience. Learn More
Ok, Go it!
To Top