




ಕಡಬ ಟೈಮ್ಸ್(KADABA TIMES):ಆಲ್ಟೋ ಕಾರೊಂದರಲ್ಲಿ ಅಕ್ರಮವಾಗಿ ಗೋ ಸಾಗಾಟ ಮಾಡಿದ್ದ ಪ್ರಕರಣಕ್ಕೆ ಸಂಬಂಧಿಸಿದಂತೆ ಇಬ್ಬರು ಆರೋಪಿಗಳನ್ನು ವಿಟ್ಲ ಠಾಣಾ ಪೊಲೀಸರು ಬಂಧಿಸಿದ್ದಾರೆ.
ಕೊಳ್ನಾಡು ಗ್ರಾಮದ ಪಂಜರ ಕೋಡಿ ನಿವಾಸಿಗಳಾದ ಬಶೀರ್ (28 ವ.) ಹಾಗೂ ನೌಫಾಲ್ (24 ವ.)ಬಂಧಿತ ಆರೋಪಿಗಳು.
ಕೇಪು ಗ್ರಾಮದ ಬೀಜಂತಡ್ಕ ಎಂಬಲ್ಲಿಂದಾಗಿ ಆಕ್ರಮವಾಗಿ ಆಲ್ಟೋ ಕಾರೊಂದರಲ್ಲಿ ಹಿಂಸಾತ್ಮಕ ರೀತಿಯಲ್ಲಿ ಎರಡು ಜಾನುವಾರುಗಳನ್ನು ಸಾಗಾಟ ಮಾಡುತ್ತಿದ್ದ ವೇಳೆ ಹಿಂದೂ ಪರ ಸಂಘಟನೆಯ ಕಾರ್ಯಕರ್ತರು ಆ ವಾಹನವನ್ನು ತಡೆದು ನಿಲ್ಲಿಸಿದಾಗ ಕಾರು ಚಾಲಕ, ಇನ್ನೋರ್ವ ವ್ಯಕ್ತಿ ಪರಾರಿಯಾಗಿದ್ದರು.

ಈ ಸುದ್ದಿಯನ್ನೂ ಓದಿರಿ:ನೆಲ್ಯಾಡಿ: ಮೂರು ತಿಂಗಳ ಹಿಂದೆಯಷ್ಟೇ ವಿವಾಹವಾಗಿದ್ದ ಉಪನ್ಯಾಸಕ ಆತ್ಮಹತ್ಯೆ
ಬಳಿಕ ಸ್ಥಳಕ್ಕಾಗಮಿಸಿದ ವಿಟ್ಲ ಠಾಣಾ ಪೊಲೀಸರು ಕಾರು ಸಹಿತ ಎರಡು ಜಾನುವಾರನ್ನು ತಮ್ಮ ವಶಕ್ಕೆ ಪಡೆದಿದ್ದರು. ಈ ಬಗ್ಗೆ ಸಾರಡ್ಕ ನಿವಾಸಿ ರಾಘವ ಮಣಿಯಾಣಿಯವರು ವಿಟ್ಲ ಪೊಲೀಸ್ ಠಾಣೆಗೆ ದೂರು ನೀಡಿದ್ದರು. ಪ್ರಕರಣ ದಾಖಲಿಸಿಕೊಂಡಿರುವ ವಿಟ್ಲ ಠಾಣಾ ಪೊಲೀಸರು ಪರಾರಿಯಗಿದ್ದ ಇಬ್ಬರು ಆರೋಪಿಗಳನ್ನು ಬಂಧಿಸಿ ನ್ಯಾಯಾಲಯಕ್ಕೆ ಹಾಜರು ಪಡಿಸಿದ್ದಾರೆ. ನ್ಯಾಯಾಲಯವು ಆರೋಪಿಗೆ ನ್ಯಾಯಾಂಗ ಬಂಧನ ವಿಧಿಸಿದೆ ಎಂದು ತಿಳಿದು ಬಂದಿದೆ.