ಅಕ್ರಮ ಗೋಮಾಂಸ ಮಾರಾಟ ಪ್ರಕರಣ: ಆರೋಪಿಯ ಆಸ್ತಿ ಜಪ್ತಿಗೆ ನೋಟಿಸ್ ಜಾರಿ

ಅಕ್ರಮ ಗೋಮಾಂಸ ಮಾರಾಟ ಪ್ರಕರಣ: ಆರೋಪಿಯ ಆಸ್ತಿ ಜಪ್ತಿಗೆ ನೋಟಿಸ್ ಜಾರಿ

Kadaba Times News

ಕಡಬ ಟೈಮ್ಸ್(KADABATIMES):ಅಕ್ರಮವಾಗಿಗೋಮಾಂಸಮಾಡಿಮಾರಾಟಮಾಡುತ್ತಿದ್ದಆರೋಪಿಬಾತೀಶ್‌ನಆಸ್ತಿಮುಟ್ಟುಗೋಲುಹಾಕಿಕೊಳ್ಳಲುಮಂಗಳೂರುಉಪವಿಭಾಗದಸಹಾಯಕಆಯುಕ್ತರು (ಎಸಿ) ನೋಟಿಸ್ನೀಡಿದ್ದಾರೆ.

ಆರೋಪಿ ಬಾತೀಶ್ ಅಕ್ರಮವಾಗಿ ಗೋಮಾಂಸ ಮಾರಾಟ ಮಾಡುತ್ತಿದ್ದ ಸ್ಥಳಕ್ಕೆ ಜುಲೈ 3 ರಂದು ಗ್ರಾಮಾಂತರ ಪೊಲೀಸರು ದಾಳಿ ನಡೆಸಿ 95 ಕೆಜಿ ದನದ ಮಾಂಸ, ತೂಕದ ತಕ್ಕಡಿ, ಕತ್ತಿಗಳು, ಮರದ ದಿಮ್ಮಿ ಇತ್ಯಾದಿಗಳನ್ನು ಜಪ್ತಿ ಮಾಡಿದ್ದಾರೆ. ಆರೋಪಿ ಎ ಕೆ ಖಾಲಿದ್ ಎಂಬುವರ ಮನೆಯ ಪಕ್ಕದ ಶೆಡ್‌ನಲ್ಲಿ ಈ ಅಕ್ರಮ ನಡೆಸುತ್ತಿದ್ದು, ಪೊಲೀಸರು ದಾಳಿ ನಡೆಸಿದಾಗ ಆತ ಸ್ಥಳದಿಂದ ಪರಾರಿಯಾಗಿದ್ದಾನೆ.

ಇನ್ನು ಆರೋಪಿಯು ಯಾವುದೇ ಅನುಮತಿಯಿಲ್ಲದೆ ಜಾನುವಾರುಗಳನ್ನು ಕೊಂದಿರುವ ಕಾರಣ, ಕೃತ್ಯ ಎಸಗಿದ ಸ್ಥಳವನ್ನು ಜಪ್ತಿ ಮಾಡುವ ಬಗ್ಗೆ ವಿಚಾರಣೆಯನ್ನು ಜುಲೈ 12 ರಂದು ಮಧ್ಯಾಹ್ನ 3 ಗಂಟೆಗೆ ಎಸಿ ನ್ಯಾಯಾಲಯದ ಸಭಾಂಗಣದಲ್ಲಿ ನಡೆಸಲಾಗುವುದು ಎಂದು ಎಸಿ ಸಲ್ಲಿಸಿದ ನೋಟಿಸ್‌ನಲ್ಲಿ ತಿಳಿಸಲಾಗಿದೆ.

ಆರೋಪಿಯು ತನ್ನ ಅಧಿಕೃತ ಪ್ರತಿನಿಧಿ ಅಥವಾ ವಕೀಲರ ಮೂಲಕ ಆ ದಿನದಂದು ತನ್ನ ವಾದಗಳನ್ನು ಅಥವಾ ಪ್ರತಿವಾದಗಳನ್ನು ಮಂಡಿಸಲು ಅನುಮತಿಸಲಾಗಿದ್ದು, ಇದನ್ನು ಅನುಸರಿಸದಿದ್ದಲ್ಲಿ, ಕಾನೂನು ಪ್ರಕಾರ ಮುಂದಿನ ಕ್ರಮ ಕೈಗೊಳ್ಳಲಾಗುವುದು ಎಂದು ತಿಳಿಸಿದ್ದಾರೆ.

#buttons=(Ok, Go it!) #days=(20)

Our website uses cookies to enhance your experience. Learn More
Ok, Go it!
To Top