




ಕಡಬ ಟೈಮ್ಸ್(KADABA TIMES):ಕಡಬ ಹೋಬಳಿಯ ನೂತನ ಕಂದಾಯ ನಿರೀಕ್ಷಕರಾಗಿ ಪೃಥ್ವಿರಾಜ್ ಅವರನ್ನು ನೇಮಿಸಿ ಕಂದಾಯ ಇಲಾಖೆಯ ಅಧೀನ ಕಾರ್ಯದರ್ಶಿ ಹರೀಶ್ ಅವರು ಅಧಿಕೃತ ಆದೇಶ ಹೊರಡಿಸಿದ್ದಾರೆ.
ಅವಿನ್ ಕುಮಾರ್ ರಂಗತ್ತ ಮಲೆ ಅವರನ್ನು ವರ್ಗಾವಣೆಗೊಳಿಸಿ ಆ ಜಾಗಕ್ಕೆ ಬೆಳ್ತಂಗಡಿ ತಾಲೂಕು ಕಚೇರಿಯ ಪ್ರಥಮ ದರ್ಜೆ ಸಹಾಯಕರಾಗಿದ್ದ ಪೃಥ್ವಿರಾಜ್ ಅವರನ್ನು ಸರ್ಕಾರ ನೇಮಿಸಿದೆ.

ಇವರು ಈ ಹಿಂದೆ ಕೊಂಬಾರು ಗ್ರಾಮಕರಣಿಕರಾಗಿಯೂ ಕರ್ತವ್ಯ ನಿರ್ವಹಿಸಿ ಬಳಿಕ ಭಡ್ತಿ ಹೊಂದಿದ್ದರು.ಕೆಲ ದಿನಗಳ ಬಳಿಕ ಕರ್ತವ್ಯಕ್ಕೆ ಹಾಜರಾಗುವ ಮಾಹಿತಿ ಲಭಿಸಿದೆ. ಅವಿನ್ ಕುಮಾರ್ ರಂಗತ್ತಮಲೆ ಅವರನ್ನು ಬೆಳ್ತಂಗಡಿ ತಾಲೂಕು ಕಚೇರಿಗೆ ವರ್ಗಾಯಿಸಲಾಗಿದೆ.