ಸುಬ್ರಹ್ಮಣ್ಯ:ವಿವಾಹಿತ ಯುವತಿಯನ್ನು ಮದುವೆಯಾಗುವುದಾಗಿ ನಂಬಿಸಿ ಲಕ್ಷ ರೂ ಪಡೆದು ವಂಚನೆ ಆರೋಪ:ಯುವಕನ ವಿರುದ್ದ ಪ್ರಕರಣ ದಾಖಲು

ಸುಬ್ರಹ್ಮಣ್ಯ:ವಿವಾಹಿತ ಯುವತಿಯನ್ನು ಮದುವೆಯಾಗುವುದಾಗಿ ನಂಬಿಸಿ ಲಕ್ಷ ರೂ ಪಡೆದು ವಂಚನೆ ಆರೋಪ:ಯುವಕನ ವಿರುದ್ದ ಪ್ರಕರಣ ದಾಖಲು

Kadaba Times News

ಕಡಬ ಟೈಮ್ಸ್(KADABA TIMES):ಕಡಬ/ಸುಬ್ರಹ್ಮಣ್ಯ: ವಿವಾಹಿತ ಯುವತಿಯೋರ್ವಳ ಜೊತೆ ದೈಹಿಕ ಸಂಪರ್ಕ ಬೆಳೆಸಿ  ಬಳಿಕ  ಮದುವೆಯಾಗುತ್ತೇನೆಂದು ನಂಬಿಸಿ ಲಕ್ಷ ರೂ  ವಂಚನೆ ಮಾಡಿದ ಆರೋಪದ ಹಿನ್ನೆಲೆಯಲ್ಲಿ ಸುಬ್ರಹ್ಮಣ್ಯ ಪೊಲೀಸ್‌ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಸಂತ್ರಸ್ತ ಯುವತಿಯು ತನ್ನ ಮಕ್ಕಳೊಂದಿಗೆ ಬಾಡಿಗೆ ಮನೆಯಲ್ಲಿ ವಾಸವಾಗಿದ್ದರು. ಮೇ.20 ರಂದು ರಾತ್ರಿ 10 ಗಂಟೆಗೆ ಪವನ್ ಎಂಬಾತ ಮದ್ಯಪಾನ ಮಾಡಿಕೊಂಡು ಯುವತಿಯನ್ನು ಅತ್ಯಾಚಾರಗೈದಿದ್ದಾನೆ ಎಂದು ದೂರಿನಲ್ಲಿ ತಿಳಿಸಲಾಗಿದೆ.

ಈ ಬಗ್ಗೆ ಯುವತಿ  ದೂರು ನೀಡಲು ಮುಂದಾದಾಗ ಆತ ಮದುವೆಯಾಗುವುದಾಗಿ ಹೇಳಿ  ವಕೀಲರೊಬ್ಬರ  ಮುಖಾಂತರ ಲಿಖಿತ ಒಪ್ಪಿಗೆ ನೀಡಿದ್ದ ಎನ್ನಲಾಗಿದೆ.

ಇದಕ್ಕಾಗಿ ಯುವತಿಯ ಕೈಯಿಂದ 1,70,000 ರೂಪಾಯಿ ಹಣವನ್ನು ಪಡೆದುಕೊಂಡು ಈಗ ಮದುವೆಯಾಗದೆ ವಂಚನೆ ಮಾಡಿದ ಹಿನ್ನೆಲೆಯಲ್ಲಿ ಆತನ ವಿರುದ್ದ   ಠಾಣೆಗೆ ದೂರು ನೀಡಿದ್ದಾಳೆ. ಅದರನ್ವಯ  ಯುವಕನ ಮೇಲೆ ಪೊಲೀಸರು ಪ್ರಕರಣ ದಾಖಲಿಸಿಕೊಂಡಿದ್ದಾರೆ.

#buttons=(Ok, Go it!) #days=(20)

Our website uses cookies to enhance your experience. Learn More
Ok, Go it!
To Top