ಸುಬ್ರಹ್ಮಣ್ಯದಲ್ಲಿ ಮಳೆಯ ನಡುವೆಯೇ ಭಾರೀ ದುರಂತ|ಗುಡ್ಡ ಜರಿದು ಇಬ್ಬರು ಹೆಣ್ಣುಮಕ್ಕಳು ಮಣ್ಣು ಪಾಲು

ಸುಬ್ರಹ್ಮಣ್ಯದಲ್ಲಿ ಮಳೆಯ ನಡುವೆಯೇ ಭಾರೀ ದುರಂತ|ಗುಡ್ಡ ಜರಿದು ಇಬ್ಬರು ಹೆಣ್ಣುಮಕ್ಕಳು ಮಣ್ಣು ಪಾಲು

Kadaba Times News

ಕಡಬ ಟೈಮ್ಸ್(KADABA TIMES):ಕಡಬ/ಸುಬ್ರಹ್ಮಣ್ಯ: ಸುಬ್ರಹ್ಮಣ್ಯದಲ್ಲಿ ಮಳೆಯ ನಡುವೆಯೇ ಭಾರೀ ದುರಂತವೊಂದು ಸಂಭವಿಸಿದೆ.ಕುಮಾರಧಾರ ಬಳಿಯಲ್ಲಿ ಗುಡ್ಡ ಜರಿದು ಮನೆಯೊಂದು ಕುಸಿದು ಬಿದ್ದಿದ್ದು ಮನೆಯೊಳಗಿನ ಇಬ್ಬರು ಮಕ್ಕಳು ಮಣ್ಣಲ್ಲಿ ಹೂತು ಹೋಗಿದ್ದಾರೆ.

ಮಣ್ಣಿನಡಿ ಸಿಲುಕಿದ ಇಬ್ಬರು ಮಕ್ಕಳ ಪತ್ತೆಗೆ ಕಾರ್ಯಾಚರಣೆ ನಡೆಯುತ್ತಿದೆ.
ಮೂಲತಃ ಪಂಜದ ಕುಸುಮಾಧರ ಕರಿಮಜಲು ಎಂಬವರ ಮನೆ ಕುಮಾರಧಾರ ಸಮೀಪದಲ್ಲಿದ್ದು, ಮನೆ ಕುಸಿತಗೊಂಡಿದ್ದು ಅವರ ಇಬ್ಬರು ಹೆಣ್ಣುಮಕ್ಕಳು ಮಣ್ಣು ಪಾಲಾಗಿದ್ದಾರೆ.

ಕುಸುಮಾಧರ ಅವರಿಗೆ ಪರ್ವತಮಕ್ಕಿಯಲ್ಲಿ ಅಂಗಡಿ ಇದ್ದು ಅವರು ಅಂಗಡಿಯಲ್ಲಿದ್ದರು.ಪತ್ನಿ ಮತ್ತು ಸಣ್ಣ ಮಗಳು ಕೂಡಾ ಹೊರಗಿದ್ದರು.ಇಬ್ಬರು ಹೆಣ್ಣುಮಕ್ಕಳು ಮನೆಯಲ್ಲಿದ್ದ ವೇಳೆ ಮನೆ ಕುಸಿದು ಅವರ ಮೇಲೆ ಬಿದ್ದಿದ್ದರಿಂದ ಅವರು ಮಣ್ಣಿನಲ್ಲಿ ಹೂತು ಹೋಗಿದ್ದಾರೆ ಎಂದು ತಿಳಿದು ಬಂದಿದೆ.ಜೆಸಿಬಿ ತರಿಸಿ ದೇಹಗಳನ್ನು ಹೊರತೆಗೆಯುವ ಪ್ರಯತ್ನ ನಡೆಯುತ್ತಿದೆ.

ಪರಿಹಾರ ಕಾರ್ಯಕ್ಕೂ ಅಡ್ಡಿ: ಕುಮಾರಧಾರಾದಿಂದ ಪಂಜ ಕಡೆಗೆ ಹೋಗುವ ರಸ್ತೆ ನೆರೆ ನೀರಲ್ಲಿ ಪೂರ್ಣ ಮುಳುಗಿರುವುದರಿಂದ ಮತ್ತು ಮರ ಕೂಡ ಬಿದ್ದಿರುವುದರಿಂದ ರಸ್ತೆ ಬಂದ್ ಆಗಿದ್ದು ಪರಿಹಾರ ಕಾರ್ಯಕ್ಕೆ ತೊಂದರೆ ಉಂಟಾಗಿದೆ.

#buttons=(Ok, Go it!) #days=(20)

Our website uses cookies to enhance your experience. Learn More
Ok, Go it!
To Top