




ಕಡಬ ಟೈಮ್ಸ್(KADABA TIMES): ಉಳ್ಳಾಲದಲ್ಲಿ ಸೆಂಟ್ರಿಂಗ್ ಕೆಲಸಕ್ಕೆ ತೆರಳುತ್ತಿದ್ದ ಬಿಜೆಪಿ ಕಾರ್ಯಕರ್ತನೋರ್ವನಿಗೆ ಅಪರಿಚಿತರು ತಲ್ವಾರ್ ದಾಳಿ ನಡೆಸಿರುವುದಾಗಿ ಸುದ್ದಿ ಹಬ್ಬಿದೆ.

ಉಚ್ಚಿಲ ಜಾಲ ಹಿತ್ತಿಲು ನಿವಾಸಿ ಕಿಶೋರ್ ಸಾಲ್ಯಾನ್ (49) ಎಂಬವರ ಮೇಲೆ ದಾಳಿಗೆ ಯತ್ನ ನಡೆದಿದೆ ಎಂದು ಸಾಮಾಜಿಕ ಜಾಲತಾಣದಲ್ಲಿ ಸುದ್ದಿ ಹರಡಿದೆ. ಈ ಬಗ್ಗೆ ಕಿಶೋರ್ ಉಳ್ಳಾಲ ಪೊಲೀಸರಿಗೆ ದೂರು ನೀಡಿದ್ದು ಎನ್ನಲಾಗಿದೆ ಈ ಬಗ್ಗೆ ಪೊಲೀಸರಿಂದ ಸ್ಪಷ್ಟನೆ ಸಿಗಬೇಕಿದೆ.