




ಕಡಬ ಟೈಮ್: ಬಾವಿಗೆ ಬಿದ್ದ ಮರಿಯಾನೆಯೊಂದನ್ನು ತಾಯಿ ಆನೆ ರಕ್ಷಿಸಿರುವ ಘಟನೆ ಕೇರಳದ ಕೊಚ್ಚಿಯ ಎರ್ನಾಕುಲಂ ಮಲಯತ್ತೂರ್ನಲ್ಲಿ ನಡೆದಿದೆ .
ಬುಧವಾರ ಬೆಳಗ್ಗೆ ಇಲ್ಲಿತ್ತೋಟ್ ಒಂದನೇ ಬ್ಲಾಕ್ನಲ್ಲಿರುವ ಸಾಜು ಎಂಬವರ ನಿವಾಸದ ಬಾವಿಗೆ ಮರಿಯಾನೆ ಬಿದ್ದಿದೆ. ಆಗ ಆನೆಗಳ ಹಿಂಡು ಘೀಳಿಟ್ಟ ಸದ್ದನ್ನು ಕೇಳಿದ ಸ್ಥಳೀಯರಿಗೆ ಈ ಘಟನೆ ಗಮನಕ್ಕೆ ಬಂದಿದೆ.
ಕೂಡಲೇ
ಸ್ಥಳೀಯರು ಅರಣ್ಯ ಇಲಾಖೆಗೆ ಈ ಕುರಿತು ಮಾಹಿತಿ
ರವಾನಿಸಿದ್ದು ಅರಣ್ಯ ಸಿಬ್ಬಂದಿಗಳು ಸ್ಥಳಕ್ಕೆ ಧಾವಿಸಿದರಾದರೂ, ಕಾಡಾನೆಗಳ ಹಿಂಡು ಬಾವಿಯ ಬಳಿಯೇ ಬೀಡು ಬಿಟ್ಟಿದ್ದುದರಿಂದ ಅವರು
ರಕ್ಷಣಾ ಕಾರ್ಯಾಚರಣೆಗೆ ತೊಡಗಲು ಸಾಧ್ಯವಾಗಿಲ್ಲ. ಹೀಗಾಗಿ ಅರಣ್ಯ ಸಿಬ್ಬಂದಿಗಳು ಆನೆಗಳ ಹಿಂಡನ್ನು ಚದುರಿಸಲು ಮುಂದಾಗಿದ್ದಾರೆ.
ಈ
ವೇಳೆ ತಾಯಿ ಆನೆಯು ಬಾವಿಯ ಕಲ್ಲುಗಳನ್ನು ಕೆಡವಿ, ಮರಿಯಾನೆಯು ಬಾವಿಯಿಂದ ಮೇಲೇರಲು ದಾರಿ ಮಾಡಿಕೊಟ್ಟಿದೆ. ಮರಿಯಾನೆಯು ಬಾವಿಯಿಂದ ಮೇಲೇರಿ ಬಂದ ನಂತರ, ಆನೆಯ ಹಿಂಡು ಕಾಡಿನತ್ತ ತೆರಳಿತು ಎಂದು ವರದಿಯಾಗಿದೆ.
ಜನವಸತಿ ಪ್ರದೇಶಗಳನ್ನು ಅತಿಕ್ರಮಿಸುತ್ತಿರುವ ವನ್ಯಜೀವಿಗಳ ನಿಯಂತ್ರಣಕ್ಕೆ ಶಾಶ್ವತ ಪರಿಹಾರ ಕಂಡುಕೊಳ್ಳುವವರೆಗೂ ಈ ಪ್ರದೇಶದ ನಿವಾಸಿಗಳು ಹೋರಾಟ ಮುಂದುವರಿಸಲು ನಿರ್ಧರಿಸಿದ್ದಾರೆ.