ಸಂಘಕ್ಕೆ ಹಣ ಕಟ್ಟಲೆಂದು ಮನೆಯಿಂದ ಹೋದ ವ್ಯಕ್ತಿ ನಾಪತ್ತೆ:ಠಾಣೆಯಲ್ಲಿ ದೂರು ದಾಖಲು

ಸಂಘಕ್ಕೆ ಹಣ ಕಟ್ಟಲೆಂದು ಮನೆಯಿಂದ ಹೋದ ವ್ಯಕ್ತಿ ನಾಪತ್ತೆ:ಠಾಣೆಯಲ್ಲಿ ದೂರು ದಾಖಲು

Kadaba Times News

 ಕಡಬ ಟೈಮ್: ವಿಟ್ಲ ಕಸಬಾ ಗ್ರಾಮದ ನೆಕ್ಕಿಲಾರು ಎಂಬಲ್ಲಿನ ವ್ಯಕ್ತಿಯೋರ್ವರು ಸಂಘಕ್ಕೆ ಹಣ ಕಟ್ಟಲೆಂದು ಮನೆಯಿಂದ ಹೋದವರು ಮನೆಗೆ ಬಾರದೇ ನಾಪತ್ತೆಯಾಗಿರುವ ಘಟನೆ ನಡೆದಿದೆ.


ನಾಪತ್ತೆಯಾದ ವ್ಯಕ್ತಿಯನ್ನು ಹೇಮಂತ್ ( 37) ಎಂದು ಗುರುತಿಸಲಾಗಿದೆ.




ಜುಲೈ 22ರಂದು ನೆಕ್ಕಿಲಾರು ಮನೆಯಿಂದ ಸಂಘಕ್ಕೆ ಹಣ ಕಟ್ಟಲು ಹೋದವರು ಮನೆಗೆ ಬಾರದೇ ಇದ್ದು ಅವರ ಮೊಬೈಲ್ಗೆ ಕರೆ ಮಾಡಿದಾಗ ಸ್ವಿಚ್ ಆಫ್ ಬಂದಿದೆ.


ಸಂಬಂಧಿಕರಲ್ಲಿ ವಿಚಾರಿಸಿದಾಗ ಎಲ್ಲಿಯೂ  ಪತ್ತೆಯಾಗಿಲ್ಲ. ನಾಪತ್ತೆಯಾದ ಯುವಕ  5 ವರೆ ಅಡಿ ಎತ್ತರವಿದ್ದು, ಕನ್ನಡ, ತುಳು ಭಾಷೆ ಮಾತನಾಡುತ್ತಾರೆ. ಗೋಧಿ ಮೈ ಬಣ್ಣ ,ಬಿಳಿ ಬಣ್ಣದ ಶರ್ಟ್ ಮತ್ತು ಕಪ್ಪು ಬಣ್ಣದ ಪ್ಯಾಂಟ್ ಧರಿಸಿರುತ್ತಾರೆ. ಬಗ್ಗೆ ವಿಟ್ಲ ಪೊಲೀಸ್ ಠಾಣೆಯಲ್ಲಿ ದೂರು ದಾಖಲಾಗಿದೆ.

#buttons=(Ok, Go it!) #days=(20)

Our website uses cookies to enhance your experience. Learn More
Ok, Go it!
To Top