




ಸುಳ್ಯ: ಎಡೆಬಿಡದೆ ಸುರಿಯುವ ಮಳೆಯ ನಡುವೆ ಸುಳ್ಯ ವ್ಯಾಪ್ತಿಯಲ್ಲಿ ಹಲವೆಡೆ ರಸ್ತೆ ಅಪಘಾತಗಳು ಸುದ್ದಿಯಾಗುತ್ತಿವೆ. ವಿಪರೀತ ಮಳೆಗೆ ಚಾಲಕನ ನಿಯಂತ್ರಣ ತಪ್ಪಿದ ಕಾರೊಂದು ರಸ್ತೆ ಬದಿಯ ಕಮರಿಗೆ ಪಲ್ಟಿಯಾದ ಘಟನೆ ಸುಳ್ಯದಿಂದ ವರದಿಯಾಗಿದೆ.
ಪೆರಾಜೆ ಗ್ರಾಮದ ದಾಸರಹಿತ್ಲುವಿನಲ್ಲಿ ಜು.18ರಂದು ಬೆಳಿಗ್ಗೆ ಈ ಘಟನೆ ಸಂಭವಿಸಿದೆ .
ಕಾಸರಗೋಡಿನಿಂ ದ ಮಡಿಕೇರಿಗೆ ಮದುವೆ ಕಾರ್ಯಕ್ರಮಕ್ಕೆಂದು ತೆರಳುತ್ತಿದ್ದ ಕಾಸರಗೋಡು
ಮೂಲದ ಮೂವರು ಪ್ರಯಾಣಿಕರಿದ್ದ ಕಾರು ಚಾಲಕನ ನಿಯಂತ್ರಣ ತಪ್ಪಿ ಪಲ್ಟಿಯಾಗಿ ಕಮರಿಗೆ ಬಿದ್ದಿದೆ.
ಕಾರಿನಲ್ಲಿದ್ದ ಮೂವರು ಪ್ರಯಾಣಿಕರು ಸಣ್ಣಪುಟ್ಟ ಗಾಯಗಳಿಂದ ಪಾರಾಗಿರುವುದಾಗಿ ತಿಳಿದುಬಂದಿದೆ.