Suicide Case:ಯಕ್ಷಗಾನ ಯುವ ಕಲಾವಿದ, ಸ್ತ್ರೀವೇಷಧಾರಿ ಆತ್ಮಹತ್ಯೆಗೆ ಶರಣು

Suicide Case:ಯಕ್ಷಗಾನ ಯುವ ಕಲಾವಿದ, ಸ್ತ್ರೀವೇಷಧಾರಿ ಆತ್ಮಹತ್ಯೆಗೆ ಶರಣು

Kadaba Times News

 ಮಂದಾರ್ತಿ, ಮಡಾಮಕ್ಕಿ, ಅಮೃತೇಶ್ವರಿ, ಸಾಲಿಗ್ರಾಮ ಹಾಗೂ ಮಾರಣಕಟ್ಟೆ ಮೇಳಗಳಲ್ಲಿ ಸುಮಾರು 12 ವರ್ಷ ಸ್ತ್ರೀವೇಷಧಾರಿಯಾಗಿ ಕಲಾಸೇವೆಗೈದ ಗುರುಪ್ರಸಾದ್ ನೀರ್ಜೆಡ್ಡು (26) ಅವರು ನಿಗೂಢವಾಗಿ ಸಾವನ್ನಪ್ಪಿದ್ದಾರೆ.

ಜು.28ರಂದು ವಿಪರೀತ ಹೊಟ್ಟೆನೋವೆಂದು ನರಳಾಡುತಿದ್ದ ಅವರನ್ನು ತಾಯಿ  ಕ್ಲಿನಿಕ್ನಲ್ಲಿ ಚಿಕಿತ್ಸೆ ಕೊಡಿಸಿದ್ದರೂ, 29 ರಾತ್ರಿ ಹೊಟ್ಟೆನೋವು ಮತ್ತೆ ಮರುಕಳಿಸಿತ್ತು.ತಕ್ಷಣ ಅವರನ್ನು 108 ಅಂಬುಲೆನ್ಸ್ನಲ್ಲಿ ಜಿಲ್ಲಾಸ್ಪತ್ರೆಗೆ ತಂದು ದಾಖಲಿಸಿದ್ದು, ಅಲ್ಲಿ ವೈದ್ಯರ ಬಳಿ ತಾನು ನಾಲ್ಕು ದಿನಗಳ ಹಿಂದೆ ವಿಷಸೇವಿಸಿದ್ದನು ಬಹಿರಂಗ ಪಡಿಸಿದ್ದರು ಎನ್ನಲಾಗಿದೆ. ಚಿಕಿತ್ಸೆಯ ಹೊರತಾಗಿಯೂ ಮಂಗಳವಾರ  ಬೆಳಗ್ಗೆ ಮೃತಪಟ್ಟರು



ಮಂದಾರ್ತಿ ಯಕ್ಷಗಾನ ತರಬೇತಿ ಕೇಂದ್ರದಲ್ಲಿ ಹಾರಾಡಿ ರಮೇಶ ಗಾಣಿಗರಿಂದ ಗುರುಪ್ರಸಾದ್ ಯಕ್ಷಗಾನ ನೃತ್ಯಾಭ್ಯಾಸ ಮಾಡಿದರು. ಭವಿಷ್ಯದಲ್ಲಿ ಭರವಸೆಯ ಕಲಾವಿದರಾಗಿದ್ದ ಇವರು ಮುಂದಿನ ತಿರುಗಾಟಕ್ಕೆ ಕುಂದಾಪುರ ತಾಲೂಕಿನ ಹಾಲಾಡಿ ಮೇಳಕ್ಕೆ ನೇಮಕಗೊಂಡಿದ್ದರು.


12 ವರ್ಷ ಸ್ತ್ರೀವೇಷಧಾರಿಯಾಗಿ ಕಲಾಸೇವೆಗೈದ ಗುರುಪ್ರಸಾದ್ ಅವರು ತಾಯಿ, ತಮ್ಮ ಹಾಗೂ ಅಭಿಮಾನಿ ಬಳಗವನ್ನು ಅಗ*ಲಿದ್ದಾರೆ. ಇವರ ನಿಧನಕ್ಕೆ ಯಕ್ಷಗಾನ ಕಲಾರಂಗದ ಅಧ್ಯಕ್ಷ ಎಂ.ಗಂಗಾಧರ ರಾವ್, ಕಾರ್ಯದರ್ಶಿ ಮುರಲಿ ಕಡೆಕಾರ್ ತೀವ್ರ ಸಂತಾಪ ವ್ಯಕ್ತಪಡಿಸಿದ್ದಾರೆ.

#buttons=(Ok, Go it!) #days=(20)

Our website uses cookies to enhance your experience. Learn More
Ok, Go it!
To Top