ಚಲಿಸುತ್ತಿದ್ದಾಗಲೇ ಟಯರ್ ಬ್ಲಾಸ್ಟ್‌; ನಿಯಂತ್ರಣ ತಪ್ಪಿ ರಸ್ತೆ ಬದಿಯ ತಡೆಬೇಲಿಗೆ ಗುದ್ದಿದ ಕಾರು

ಚಲಿಸುತ್ತಿದ್ದಾಗಲೇ ಟಯರ್ ಬ್ಲಾಸ್ಟ್‌; ನಿಯಂತ್ರಣ ತಪ್ಪಿ ರಸ್ತೆ ಬದಿಯ ತಡೆಬೇಲಿಗೆ ಗುದ್ದಿದ ಕಾರು

Kadaba Times News

 ಕಡಬ ಟೈಮ್ಸ್, ಸುಳ್ಯ: ಮಳೆಗಾಲದಲ್ಲಿ ವಾಹನಗಳ ಅಪಘಾತ ಹೆಚ್ಚುತ್ತಿದೆ. ಇದೀಗ  ಟಯರ್ ಏಕಾಏಕಿ ಸಿಡಿದು  ಕಾರೊಂದು ರಸ್ತೆ ಬದಿಯ ತಡೆಬೇಲಿಗೆ ಢಿಕ್ಕಿ ಹೊಡೆದ ಘಟನೆ ಸುಳ್ಯದಿಂದ ವ್ರದಿಯಾಗಿದೆ.


ಜು.22ರಂದು ಜಾಲ್ಸೂರು ಗ್ರಾಮದ ಕದಿಕಡ್ಕದಲ್ಲಿ ಘಟನೆ ನಡೆದುದ್ದು  ಚಾಲಕ  ಅಪಾಯದಿಂದ ಪಾರಾಗಿದ್ದಾರೆ.

 


ಮಂಗಳೂರಿನಿಂದ ಮಡಿಕೇರಿಯ ಕುಶಾಲನಗರಕ್ಕೆ ತೆರಳುತ್ತಿದ್ದ ಕುಶಾಲನಗರದ ಧನಂಜಯ ಎಂಬವರು ಚಲಾಯಿಸುತ್ತಿದ್ದ  ಕಾರು ಕದಿಕಡ್ಕದ ತಲುಪುತ್ತಿದ್ದಂತೆ ಟಯರ್  ಸಿಡಿದು ಚಾಲಕನ ನಿಯಂತ್ರಣ ತಪ್ಪಿ ರಸ್ತೆ ಬದಿಯ ತಡೆಬೇಲಿಗೆ ಢಿಕ್ಕಿ ಹೊಡೆದಿದೆ .


ಘಟನೆಯ ಮಾಹಿತಿ ತಿಳಿಯುತ್ತಿದ್ದಂತೆ ಸ್ಥಳೀಯರು ಆಗಮಿಸಿ ರಕ್ಷಣೆಗೆ ಧಾವಿಸಿ ಬಂದಿದ್ದಾರೆ.

#buttons=(Ok, Go it!) #days=(20)

Our website uses cookies to enhance your experience. Learn More
Ok, Go it!
To Top