ಉಪ್ಪಿನಂಗಡಿ ಬಳಿ ಐರಾವತ ಬಸ್ಸಿನ ಹಿಂಬದಿ ಎಸಿಗೆ ಹತ್ತಿಕೊಂಡ ಬೆಂಕಿ:ರಸ್ತೆ ಗುಂಡಿಯಲ್ಲಿದ್ದ ಕೆಸರು ನೀರು ಎರಸಿ ಬೆಂಕಿ ನಂದಿಸಿದ ಸ್ಥಳೀಯರು

ಉಪ್ಪಿನಂಗಡಿ ಬಳಿ ಐರಾವತ ಬಸ್ಸಿನ ಹಿಂಬದಿ ಎಸಿಗೆ ಹತ್ತಿಕೊಂಡ ಬೆಂಕಿ:ರಸ್ತೆ ಗುಂಡಿಯಲ್ಲಿದ್ದ ಕೆಸರು ನೀರು ಎರಸಿ ಬೆಂಕಿ ನಂದಿಸಿದ ಸ್ಥಳೀಯರು

Kadaba Times News

 ಕಡಬ ಟೈಮ್ಸ್, ಕೆಎಸ್ಸಾರ್ಟಿಸಿ ಸಂಸ್ಥೆಯ ಐರಾವತ ಬಸ್ಸೊಂದಕ್ಕೆ ಬೆಂಕಿ ಹಿಡಿದ ಘಟನೆ ಉಪ್ಪಿನಂಗಡಿಯ  ಹಳೆಗೇಟು ಬಳಿ ಜು.18 ಬೆಳಗ್ಗೆ ನಡೆದಿದ್ದು, ಸ್ಥಳೀಯ ಯುವಕರ ತಂಡ  ಬೆಂಕಿ ನಂದಿಸಿದ್ದು ಸಂಭವಿಸಬಹುದಾಗಿದ್ದ ಅವಘಡ ತಪ್ಪಿಸಿದ್ದಾರೆ.


ಬೆಂಗಳೂರಿನಿಂದಮಂಗಳೂರಿಗೆ ಆಗಮಿಸುತ್ತಿದ್ದ ಐರಾವತ ಬಸ್ಸಿನ ಹಿಂಬದಿ ಎಸಿಗೆ ಬೆಂಕಿ ಹತ್ತಿಕೊಂಡಿದ್ದು, ಇದನ್ನು ಗಮನಿಸಿದ ಚಾಲಕ ಹಳೆಗೇಟು ಬಳಿ ಬಸ್ಸನ್ನು ನಿಲ್ಲಿಸಿದ್ದಾನೆ. ಆಗ ಪ್ರಯಾಣಿಕರೆಲ್ಲರೂ ಬಸ್ಸಿನಿಂದ ಇಳಿದಿದ್ದಾರೆ.




ಆಗ ಅಲ್ಲಿದ್ದ ಉಪ್ಪಿನಂಗಡಿ ಗ್ರಾ.ಪಂ. ಸಿಬ್ಬಂದಿಗಳು  ಅಟೋ ಚಾಲಕರು ರಸ್ತೆಯಲ್ಲಿದ್ದ ಕೆಸರು, ಮಣ್ಣು, ನೀರನ್ನು ಬಸ್ಸಿಗೆ ಎರಚಿ ಬೆಂಕಿಯನ್ನು ಹತೋಟಿಗೆ ತಂದಿದ್ದಾರೆ

ಬಸ್ಸಿನ ಹಿಂಬದಿಗೆ ಹಾನಿಯಾಗಿದೆ. ಮಳೆಗಾಲದ ಸಂದರ್ಭದಲ್ಲಿ ರಸ್ತೆಯಲ್ಲಿದ್ದ ಹೊಂಡ- ಗುಂಡಿಯಲ್ಲಿ ನೀರು ತುಂಬಿದ್ದರಿಂದ ಇದು ಬೆಂಕಿ ನಂದಿಸಲು ತಕ್ಷಣದ ನೆರವಿಗೆ ಬಂದಿದೆ.

#buttons=(Ok, Go it!) #days=(20)

Our website uses cookies to enhance your experience. Learn More
Ok, Go it!
To Top