ಕಡಬದ ಎಡಮಂಗಲ ಗ್ರಾಮದಲ್ಲಿ ಎರಡುವರ್ಷಗಳ ಹಿಂದೆ ನಡೆದ ಕಳ್ಳತನ ಪ್ರಕರಣ ಭೇದಿಸಿದ ಪೊಲೀಸರು

ಕಡಬದ ಎಡಮಂಗಲ ಗ್ರಾಮದಲ್ಲಿ ಎರಡುವರ್ಷಗಳ ಹಿಂದೆ ನಡೆದ ಕಳ್ಳತನ ಪ್ರಕರಣ ಭೇದಿಸಿದ ಪೊಲೀಸರು

Kadaba Times News

 ಕಡಬ/ಬೆಳ್ಳಾರೆ:  ಕಡಬ ತಾಲೂಕು ಎಡಮಂಗಲ ಗ್ರಾಮದ ದಡ್ಡು ಎಂಬಲ್ಲಿ ನಡೆದ ಎಂಬಲ್ಲಿ ನಡೆದ ಕಳ್ಳತನ ಪ್ರಕರಣವನ್ನು ಬೆಳ್ಳಾರೆ ಪೊಲೀಸರು ಭೇದಿಸಿದ್ದು, ಆರೋಪಿಯನ್ನು ವಶಕ್ಕೆ ಪಡೆದಿದ್ದಾರೆ.


ಪ್ರಕರಣದ ಆರೋಪಿ ಬೆಳ್ತಂಗಡಿ ನೆರಿಯಾ ನಿವಾಸಿ ಶರತ್ (24) ಎಂಬಾತನನ್ನು ವಶಕ್ಕೆ ಪಡೆದು, ಕಳವು ಮಾಡಿದ ಸೊತ್ತು ಗಳನ್ನು ಪತ್ತೆ ಮಾಡಿ  ವಶಕ್ಕೆ ಪಡಿಸಿಕೊಂಡಿದ್ದಾರೆ.



ಸುಮಾರು ₹1,48,000 ಮೌಲ್ಯದ ಚಿನ್ನಾಭರಣಗಳು ಮತ್ತು ನಗದು ಹಣ ₹ 30,000/- ಸೇರಿ ಒಟ್ಟು ₹1,78,000/- ಮೌಲ್ಯದ ಮನೆಕಳ್ಳತನ ಪ್ರಕರಣಕ್ಕೆ ಸಂಬಂಧಿಸಿದಂತೆ, ಬೆಳ್ಳಾರೆ ಠಾಣೆಯಲ್ಲಿ ಅಪರಾಧ ಕ್ರಮಾಂಕ. 22/2022 ಕಲಂ 457,380 ಭಾ. ದಂ. ಸಂ ರಂತೆ ಪ್ರಕರಣ ದಾಖಲಿಸಿಕೊಂಡು, ಕಳೆದ ಎರಡು ವರ್ಷಗಳಿಂದ ತನಿಖೆ ನಡೆಸಲಾಗಿತ್ತು.


ಈ ಪ್ರಕರಣದ ಪತ್ತೆ  ಕಾರ್ಯದಲ್ಲಿ  ಜಿಲ್ಲಾ ಪೊಲೀಸ್ ಅಧಿಕ್ಷಕರಾದ ಸಿ ಬಿ ರಿಷ್ಯಂತ್,ಐಪಿಎಸ್,  ಜಿಲ್ಲಾ ಹೆಚ್ಚುವರಿ ಪೊಲೀಸ್ ಅಧೀಕ್ಷಕ ಜಗದೀಶ್ ಎಂ,ಕೆ ಎಸ್. ಪಿ ಎಸ್ ,  ರಾಜೇಂದ್ರ ಕೆ ಎಸ್ಪಿಎಸ್  ರವರುಗಳ ನಿರ್ದೇಶನದಂತೆ  ಪ್ರಭಾರ ಪೊಲೀಸ್ ಉಪಾಧೀಕ್ಷಕ ವಿಜಯ ಪ್ರಸಾದ್ , ಪುತ್ತೂರು ಉಪವಿಭಾಗ ರವರ ಮತ್ತು ಸುಳ್ಯ ವೃತ್ತ ನಿರೀಕ್ಷಕ  ಸತ್ಯನಾರಾಯಣ ಕೆ ರವರ ನೇತೃತ್ವದಲ್ಲಿ ಪತ್ತೆ ಕಾರ್ಯ ನಡೆದಿತ್ತು.


 ಬೆಳ್ಳಾರೆ ಎಸ್.ಐ , ಸಂತೋಷ್ ಬಿ ಪಿ  ಠಾಣಾ ಸಿಬ್ಬಂಧಿಗಳಾದ ನವೀನ ಕೆ. ಚಂದ್ರಶೇಖರ್ ಗೌಡ, ಸಂತೋಷ್ ಜಿ. ಜೀಪು ಚಾಲಕ ಪುರಂದರ ಹಾಗೂ ಬೆರಳುಮುದ್ರೆ ಘಟಕದ ಪ್ರಶಾಂತ್ ಹೊಸಮನಿ ಮತ್ತು ಸಚಿನ್ ಬಿ. ಬಿ ರವರನ್ನೊಳಗೊಂಡು ವಿಶೇಷ ತನಿಖಾ ತಂಡವು ಕರ್ತವ್ಯ ನಿರ್ವಹಿಸಿತ್ತು. ಸದ್ರಿ ತನಿಖಾ ತಂಡಕ್ಕೆ ಜಿಲ್ಲಾ ಪೊಲೀಸ್ ಅಧೀಕ್ಷಕರಿಂದ ಮತ್ತು ಸಾರ್ವಜನಿಕ ವಲಯದಲ್ಲಿ ಪ್ರಶಂಸೆಯನ್ನು ವ್ಯಕ್ತವಾಗಿದೆ.

Tags

#buttons=(Ok, Go it!) #days=(20)

Our website uses cookies to enhance your experience. Learn More
Ok, Go it!
To Top