




ಕಡಬ: ಕೆಲಸಕ್ಕೆ ಹೋಗಿ ಮನೆಗೆ ಬಂದ ಯುವಕನೊಬ್ಬ ಕೋಣೆಯಲ್ಲಿ ಸೀರೆ ಬಳಸಿ ಆತ್ಮಹತ್ಯೆಗೆ ಶರಣಾದ ಘಟನೆ ಜುಲೈ 20 ರಾತ್ರಿ ಕಡಬದಲ್ಲಿ ನಡೆದಿದೆ.
ಕಳಾರ ಸಮೀಪದ ತಿಮರಡ್ಡ ನಿವಾಸಿ ಆಝರ್ ( 28) ಆತ್ಮಹತ್ಯೆ ಮಾಡಿಕೊಂಡ ಯುವಕ.
ಟಿಂಬರ್ ವೃತ್ತಿ ಮಾಡುತ್ತಿದ್ದ ಈತ ಎಂದಿನಂತೆ ಶನಿವಾರವೂ ಕೆಲಸಕ್ಕೆ ತೆರಳಿ ಮನೆಗೆ ಬಂದಿದ್ದರು. ತನ್ನ ಮಗುವಿಗೂ ತಿನಿಸು ತಂದಿದ್ದರು ಎನ್ನಲಾಗಿದೆ.
ಬಳಿಕ ಕೋಣೆಯೊಳಗೆ ತೆರಳಿ ಸೀರೆ ಬಳಸಿ ಆತ್ಮಹತ್ಯೆ ಮಾಡಿಕೊಂಡಿರುವುದಾಗಿ ತಿಳಿದು ಬಂದಿದೆ.ಮೃತದೇಹವನ್ನು ಕಡಬ ಸಮುದಾಯ ಆಸ್ಪತ್ರೆಯ ಶವಗಾರದಲ್ಲಿ ಇರಿಸಲಾಗಿದೆ ಹೆಚ್ವಿನ ಮಾಹಿತಿ ಪೊಲೀಸರ ಪರಿಶೀಲನೆಯ ಬಳಿಕ ತಿಳಿದು ಬರಬೇಕಿದೆ.
ನಿಮ್ಮ ಸಮಸ್ಯೆಗಳಿಗೆ ಆತ್ಮಹತ್ಯೆ ಒಂದೇ ಪರಿಹಾರವಲ್ಲ, ಕೂಡಲೇ ಆಪ್ತ ಸಮಲೋಚರನ್ನು ಸಂಪರ್ಕಿಸಿ ಸಲಹೆ ಪಡೆಯಿರಿ