




ಕಡಬ: ಉಪ್ಪಿನಂಗಡಿ-ಸುಬ್ರಹ್ಮಣ್ಯ ರಾಜ್ಯ ಹೆದ್ದಾರಿಯ ಬಿಳಿನೆಲೆ ಬಳಿ ಬಸ್ಸುಗಳೆರಡು ಮುಖಾಮುಖಿ ಡಿಕ್ಕಿಯಾದ ಘಟನೆ ಆ.1ರ ಮಧ್ಯಾಹ್ನ ಸಂಭವಿಸಿದೆ.
ಬಿಳಿನೆಲೆ ಸಿ.ಪಿ.ಸಿ.ಆರ್.ಐ
ಬಳಿ ಈ ಅಪಘಾತ ನಡೆದಿದ್ದು ಬಸ್ಸಿನಲ್ಲಿದ್ದ ಕೆಲ ಪ್ರಯಾಣಿಕರಿಗೆ
ಗಾಯವಾಗಿದ್ದು ಎರಡೂ ಬಸ್ಸುಗಳ ಮುಂಭಾಗ ಭಾಗಶ: ಹಾನಿಯಾಗಿದೆ
ತಿರುವುಗಳಿಂದ ಕೂಡಿರುವ ಈ ರಸ್ತೆಯಲ್ಲಿ ತೀವ್ರ ಮಳೆಯ ನಡುವೆ ಅತೀ ವೇಗದಿಂದ ಸಂಚರಿಸಿರುವುದೇ ಅಪಘಾತಕ್ಕೆ ಕಾರಣ ಎಂದು
ಹೇಳಲಾಗುತ್ತಿದೆ.
ಮಾಹಿತಿ ತಿಳಿದು ಕಡಬ ಪೊಲೀಸರು ಘಟನಾ ಸ್ಥಳಕ್ಕೆ ಭೇಟಿ ನೀಡಿದ್ದಾರೆ.
ಕೆಲ ಹೊತ್ತು ವಾಹನ ಸಂಚಾರದಲ್ಲಿ ವ್ಯತ್ಯಯ ಉಂಟಾಗಿತ್ತು. ಈ ಕುರಿತು
ಹೆಚ್ಚಿನ ಮಾಹಿತಿ ನಿರೀಕ್ಷಿಸಲಾಗುತ್ತಿದೆ.