ನೆಲ್ಯಾಡಿ ವಿವಿ ಘಟಕ ಕಾಲೇಜಿನಲ್ಲಿ ಉದ್ಯೋಗ ನೋಂದಣಿ ಮತ್ತು ವೃತ್ತಿ ಮಾರ್ಗದರ್ಶನ ಕಾರ್ಯಕ್ರಮ

Kadaba Times News

ನೆಲ್ಯಾಡಿ: ಇಲ್ಲಿನ ವಿಶ್ವ ವಿದ್ಯಾನಿಲಯ ಘಟಕ ಕಾಲೇಜಿನಲ್ಲಿ ವಿದ್ಯಾರ್ಥಿಗಳಿಗೆ  ಉದ್ಯೋಗ ನೋಂದಣಿ ಹಾಗೂ ವೃತ್ತಿ ಮಾರ್ಗದರ್ಶನ' ಕಾರ್ಯಕ್ರಮದಡಿ ತರಬೇತಿ ಕಾರ್ಯಕ್ರಮವು  ಆ.28ರಂದು ನಡೆಯಿತು.

ಶ್ರೀಮತಿ ಮಂಜೂಷ ಅವರು ಕಾರ್ಯಕ್ರಮ ನಡೆಸಿಕೊಡುತ್ತಿರುವುದು


ಜಿಲ್ಲಾ ಉದ್ಯೋಗ ವಿನಿಮಯ ಕಚೇರಿಯ  ಕೌನ್ಸಿಲರ್ ಕಂ ಟ್ರೈನರ್  ಶ್ರೀಮತಿ ಮಂಜೂಷ ಅವರು  ವಿದ್ಯಾರ್ಥಿಗಳನ್ನು ಉದ್ಯೋಗಕ್ಕೆ ನೋಂದಣಿ ಮಾಡಿಸುವುದರ ಮೂಲಕ ಉದ್ಯೋಗ ಕಾರ್ಡ್ ನೀಡಿ ವಿದ್ಯಾರ್ಥಿಗಳಿಗೆ  ಅದರ ಉಪಯುಕ್ತತೆ ಹಾಗೂ ಬಳಸುವಿಕೆಯ ಕುರಿತಂತೆ ಮಾಹಿತಿ ನೀಡಿದರು. ಇದರೊಂದಿಗೆ ಸ್ಪರ್ಧಾತ್ಮಕ ಪರೀಕ್ಷೆಗಳ ಕುರಿತು, ಸಂದರ್ಶನ ಎದುರಿಸುವ ಬಗೆಯನ್ನು ತಿಳಿಸಿದರು.


ಈ ಸಂದರ್ಭದಲ್ಲಿ ಕಾಲೇಜಿನ ಸಂಯೋಜಕ ಡಾ. ಸುರೇಶ್  ಹಾಜರಿದ್ದರು ,  ಇತಿಹಾಸ ವಿಭಾಗದ ಮುಖ್ಯಸ್ಥ ಡಾ. ಪಿ ಸೀತಾರಾಮ ಸ್ವಾಗತಿಸಿ ,ವಾಣಿಜ್ಯ ವಿಭಾಗದ ಉಪನ್ಯಾಸಕಿ ಶ್ರೀ ಮತಿ ಪಾವನ ರೈ ಧನ್ಯವಾದವಿತ್ತರು.   ಕಾಲೇಜಿನ ಬೋಧಕ, ಬೋಧಕೇತರ ಸಿಬ್ಬಂದಿಗಳು ಉಪಸ್ಥಿತರಿದ್ದರು.

#buttons=(Ok, Go it!) #days=(20)

Our website uses cookies to enhance your experience. Learn More
Ok, Go it!
To Top