


ಕಡಬ ಟೈಮ್ಸ್ : ಧರ್ಮಸ್ಥಳಕ್ಕೆ ಬೈಕ್ ನಲ್ಲಿ ತೆರಳುತ್ತಿದ್ದ ಮೈಸೂರು ಮೂಲದ ಇಬ್ಬರು ಯುವಕರು ರಾತ್ರಿ ವೇಳೆ ಮೋರಿಗೆ ಢಿಕ್ಕಿ ಹೊಡೆದು ಸ್ಥಳದಲ್ಲೇ ಸಾವನ್ನಪ್ಪಿದ ಘಟನೆ ಆ.4ರ ತಡ ರಾತ್ರಿ ಸುಳ್ಯ ಬಳಿ ನಡೆದಿದೆ.
ಕೊಡಗು -ಸಂಪಾಜೆಯ ಅರಣ್ಯ ಇಲಾಖಾ ಕಛೇರಿ ಬಳಿ ಮುಖ್ಯರಸ್ತೆ ಬದಿಯಲ್ಲಿದ್ದ ಮೋರಿಗೆ ಬೈಕ್ ಢಿಕ್ಕಿ ಹೊಡೆದಿರುವುದಾಗಿ ತಿಳಿದು ಬಂದಿದೆ .
ಮೋರಿಗೆ ಢಿಕ್ಕಿ ಹೊಡೆದ ಪರಿ ಣಾಮ ಪಕ್ಕದ ಚರಂಡಿಗೆ ಎಸೆಯಲ್ಪಟ್ಟು ಸ್ಥಳದಲೇ ಇಬ್ಬರು ಮೃತಪಟ್ಟ ರೀತಿಯಲ್ಲಿ ಕಂಡು ಬಂದಿದೆ.
ಕೊಡಗು ಸಂಪಾಜೆ ಪೊಲೀಸ್ ಉಪಠಾಣೆಯಲ್ಲಿ ಪ್ರಕರಣ ದಾಖಲಾಗಿರುವುದಾಗಿ ತಿಳಿದು ಬಂದಿದೆ