ವಿಟ್ಲದಲ್ಲಿ ಪಂಪ್ ಕಳ್ಳತನ ಪ್ರಕರಣ: ಕಡಬದ ಕುಂತೂರಿನ ಯುವಕ ಪೊಲೀಸ್ ಬಲೆಗೆ

ವಿಟ್ಲದಲ್ಲಿ ಪಂಪ್ ಕಳ್ಳತನ ಪ್ರಕರಣ: ಕಡಬದ ಕುಂತೂರಿನ ಯುವಕ ಪೊಲೀಸ್ ಬಲೆಗೆ

Kadaba Times News
ವಿಟ್ಲ/ ಕಡಬ : ರಿಪೇರಿಗೆಂದು ತಂದಿರಿಸಿದ್ದ ಬೋರ್‌ ವೆಲ್‌ ಪಂಪ್‌ ಗಳನ್ನು ಕಳವು ಮಾಡಿದ ಪ್ರಕರಣಕ್ಕೆ ಸಂಬಂಧಿಸಿದ ಆರೋಪಿಯನ್ನು ಬಂಧಿಸುವಲ್ಲಿ ವಿಟ್ಲ ಪೊಲೀಸರು ಯಶಸ್ವಿಯಾಗಿದ್ದು, ಕಡಬದ ಯುವಕನೊಬ್ಬನನ್ನು ಬಂಧಿಸಲಾಗಿದೆ.

ಕಡಬ ತಾಲೂಕಿನ ಕುಂತೂರು ಗ್ರಾಮದ  ಮಹಮ್ಮದ್ ಶಾಕೀರ್ ಬಂಧಿತ ಆರೋಪಿ ಎಂದು ತಿಳಿದು ಬಂದಿದೆ. ಇಬ್ಬರು ಆರೋಪಿಗಳು ಪರಾರಿಯಾಗಿದ್ದಾರೆ.

2024 ಜುಲೈ 21ರಿಂದ 22ರ ಮಧ್ಯದ ಅವಧಿಯಲ್ಲಿ ಬಂಟ್ವಾಳ ತಾಲೂಕು ಪುಣಚ ಗ್ರಾಮದ ಗುರ್ಮೆ ಎಂಬಲ್ಲಿರುವ ಗಣೇಶ್‌ ಗೌಡ ಎಂಬವರ ಮನೆಯ ಬಳಿಯಿರುವ ಕಟ್ಟಡದಲ್ಲಿ ಸಾರ್ವಜನಿಕರಿಂದ ರಿಪೇರಿಗಾಗಿ ಪಡೆದು ಇರಿಸಿದ್ದ ಅಂದಾಜು 1,81,000/- ರೂ. ಮೌಲ್ಯದ ಒಟ್ಟು 16 ಬೊರ್‌ವೆಲ್‌ ಪಂಪುಗಳನ್ನು ಕಳ್ಳರು ಕಳ್ಳತನ ಮಾಡಿದ ಬಗ್ಗೆ ವಿಟ್ಲ ಠಾಣೆಯಲ್ಲಿ ಅ.ಕ್ರ.119/2024 ಕಲಂ:303(2) ಭಾರತೀಯ ನ್ಯಾಯ ಸಂಹಿತೆ 2023 ರಂತೆ ಪ್ರಕರಣ ದಾಖಲಾಗಿದ್ದು, ಪತ್ತೆಗೆ ವಿಶೇಷ ತಂಡ ರಚಿಸಲಾಗಿತ್ತು.

ಆರೋಪಿಯ ಪತ್ತೆ ಕಾರ್ಯಾಚರಣೆಯಲ್ಲಿ ಬಂಟ್ವಾಳ ಉಪವಿಭಾಗದ ಪೊಲೀಸ್ ಉಪಾಧೀಕ್ಷಕರಾದ ಎಸ್.‌ ವಿಜಯ ಪ್ರಸಾದ್‌ ಮಾರ್ಗದರ್ಶನದಂತೆ ವಿಟ್ಲ ಪೊಲೀಸ್ ಠಾಣಾ ಪೊಲೀಸ್‌ ನಿರೀಕ್ಷಕರಾದ ನಾಗರಾಜ್‌ ಹೆಚ್‌ ಈ ನಿರ್ದೇಶನದಂತೆ, ಪೊಲೀಸ್‌ ಉಪ ನಿರೀಕ್ಷಕರಾದ ರತ್ನಕುಮಾರ್‌ ಎಂ ನೇತೃತ್ವದಲ್ಲಿ ಸಿಬ್ಬಂಧಿಗಳಾದ ಉದಯ ರೈ, ರಾಧಾಕೃಷ್ಣ ಕರುಣಾಕರ,ಶ್ರೀಧರ್‌ ಸಿ ಎಸ್‌, ಶಂಕರ ಸಂಶಿ, ಗದಿಗಪ್ಪ, ಮನೋಜ್‌, ಗಣಕಯಂತ್ರ ವಿಭಾಗದ ಸಂಪತ್‌, ದಿವಾಕರ್‌ ಭಾಗವಹಿಸಿದ್ದರು. 


#buttons=(Ok, Go it!) #days=(20)

Our website uses cookies to enhance your experience. Learn More
Ok, Go it!
To Top