ನೆಲ್ಯಾಡಿ: ವಾಟ್ಸಪ್ ಸ್ಟೇಟಸ್ ಹಾಕಿದ ಬಳಿಕ ಆತ್ಮಹತ್ಯೆ ಮಾಡಿಕೊಂಡ ರಬ್ಬರ್ ಟ್ಯಾಪರ್

Kadaba Times News

 ನೆಲ್ಯಾಡಿ: ರಬ್ಬರ್ ಟ್ಯಾಪರ್ ಮಾನಸಿಕವಾಗಿ ನೊಂದು ತನ್ನ ಮನೆಯಲ್ಲೇ ಆತ್ಮಹತ್ಯೆ ಮಾಡಿಕೊಂಡ ಘಟನೆ ಸೆ.19ರಂದು  ಸಿರಿಬಾಗಿಲು ಗ್ರಾಮದಿಂದ  ವರದಿಯಾಗಿದೆ.

 ಸಿರಿಬಾಗಿಲು ಗ್ರಾಮದ ಪುಲ್ಲೊಟ್ಟೆ ನಿವಾಸಿ  ಲೋಹಿತ್ಕುಮಾರ್ (47ವ.) ಆತ್ಮಹತ್ಯೆ ಮಾಡಿಕೊಂಡವರು.



ರಬ್ಬರ್ ಟ್ಯಾಪಿಂಗ್ ಕೆಲಸ ಮಾಡಿಕೊಂಡಿದ್ದ ಇಅವರು ಮದ್ಯಪಾನ  ಸೇವಿಸುವ ಚಟ ಹೊಂದಿದ್ದರು ಎನ್ನಲಾಗಿದೆ . ಹೀಗಾಗಿ ದಂಪತಿಗಳ ನಡುವೆ ಮನಸ್ತಾಪಗೊಂಡು  ಪತ್ನಿ ತನ್ನ ಮಕ್ಕಳೊಂದಿಗೆ ಕೆಲ ದಿನಗಳ ಹಿಂದೆ ತನ್ನ ತಾಯಿ ಮನೆಗೆ ಹೋಗಿದ್ದರು. 


ಸೆ.18ರಂದು ಸಂಜೆ ಗುಂಡ್ಯಕ್ಕೆ ಹೋಗಿ ಮನೆಗೆ ಬಂದಿದ್ದರು.  ಬಳಿಕ ಮೊಬೈಲ್ ವಾಟ್ಸಫ್ ಸ್ಟೇಟಸ್ ನಲ್ಲಿ ಆತ್ಮಹತ್ಯೆ ಮಾಡಿಕೊಳ್ಳುತ್ತಿರುವ ಬಗ್ಗೆ ಸಂದೇಶ ಹಾಕಿದ್ದು  ಮಂಗಳೂರಿನಲ್ಲಿರುವ  ಇವರ ಅಣ್ಣನ ಮಗಳು ಬೆಳಿಗ್ಗೆ ನೋಡಿ  ಮಾಹಿತಿ ನೀಡಿದ್ದರು.

 

ಬೆಳಿಗ್ಗೆ  ಲೋಹಿತ್ ವಾಸವಾಗಿದ್ದ ಮನೆಗೆ ಹೋಗಿ ನೋಡಿದಾಗ  ಮನೆಯ ಹಾಲ್ನಲ್ಲಿ ಮರದ ಅಡ್ಡಕ್ಕೆ ಸೀರೆಯನ್ನು ಕಟ್ಟಿ ನೇಣು ಬಿಗಿದು ನೇತಾಡಿಕೊಂಡಿರುವುದು ಗಮನಕ್ಕೆ ಬಂದಿದ್ದು ಪರಿಶೀಲಿಸಿದಾಗ ಮೃತಪಟ್ಟಿದ್ದರು ಎಂದು ತಿಳಿದು ಬಂದಿದೆ.


ವಿಪರೀತ ಅಮಲು ಪದಾರ್ಥ ಸೇವಿಸುತ್ತಿದ್ದ ಪರಿಣಾಮ ಮಾನಸಿಕ ಸ್ಥಿಮಿತ ಕಳೆದುಕೊಂಡು ಸಂಸಾರದಲ್ಲಿ ಜಿಗುಪ್ಸೆಗೊಂಡು ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿರುವುದಾಗಿ ಮೃತರ ತಂದೆ ಸ್ವರ್ಣಪ್ಪನ್  ನೀಡಿದ ದೂರಿನಂತೆ ಉಪ್ಪಿನಂಗಡಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.


#buttons=(Ok, Go it!) #days=(20)

Our website uses cookies to enhance your experience. Learn More
Ok, Go it!
To Top