ಶಿರಾಡಿ ಘಾಟಿಯ ಡಬಲ್‌ಟರ್ನ್ ಬಳಿ ಬೆಂಕಿಗಾಹುತಿಯಾದ ಲಾರಿ

Kadaba Times News

 ನೆಲ್ಯಾಡಿ: ಈಚರ್ ಲಾರಿಯೊಂದು ಬೆಂಕಿಗಾಹುತಿಯಾದ ಘಟನೆ ಮಂಗಳೂರು-ಬೆಂಗಳೂರು ರಾಷ್ಟ್ರೀಯ ಹೆದ್ದಾರಿ 75 ಶಿರಾಡಿ ಘಾಟಿಯ ಡಬಲ್ಟರ್ನ್ ಬಳಿ ಸೆ.11ರಂದು ಬೆಳಿಗ್ಗೆ ನಡೆದಿದೆ.

ಬೆಂಕಿಗಾಹುತಿಯಾದ ಲಾರಿ


ಮಂಗಳೂರಿನಿಂದ ಬೆಂಗಳೂರು ಕಡೆಗೆ ಸಂಚರಿಸುತ್ತಿದ್ದ ಈಚರ್ ಲಾರಿಯಲ್ಲಿ ಶಿರಾಡಿ ಘಾಟಿಯ ಡಬಲ್ಟರ್ನ್ ಬಳಿ ತಲುಪುತ್ತಿದ್ದಂತೆ ಹೊಗೆ ಕಾಣಿಸಿಕೊಂಡಿದೆ ಎಂದು ತಿಳಿದು ಬಂದಿದೆ.

 

ಚಾಲಕ ಲಾರಿಯನ್ನು ಹೆದ್ದಾರಿ ಬದಿ ನಿಲ್ಲಿಸಿ ಕೆಳಕ್ಕಿಳಿದಿದ್ದಾರೆ. ಬಳಿಕ ಲಾರಿಯಲ್ಲಿ ಬೆಂಕಿ ಕಾಣಿಸಿಕೊಂಡು ಸುಟ್ಟುಹೋಗಿದೆ ಎಂದು ವರದಿಯಾಗಿದೆ.

#buttons=(Ok, Go it!) #days=(20)

Our website uses cookies to enhance your experience. Learn More
Ok, Go it!
To Top