


ಕಡಬ ಟೈಮ್: ಚಿರತೆ ಪ್ರತ್ಯಕ್ಷಗೊಂಡು ಆತಂಕದಲ್ಲಿದ್ದ ಗ್ರಾಮಸ್ಥರು ಕೊಂಚ ಮಟ್ಟಿಗೆ ನಿಟ್ಟುಸಿರು ಬಿಟ್ಟಿದ್ದಾರೆ.ಹೌದು ಬೆಳ್ತಂಗಡಿಯ ಸವಣಾಲು ಗ್ರಾಮದಲ್ಲಿ ಕಳೆದ 2 ತಿಂಗಳ ಹಿಂದೆ ಕಾಣಿಸಿಕೊಂಡ ಚಿರತೆ ಕೊನೆಗೆ ಬೋನಿಗೆ ಬಿದ್ದಿದೆ.
![]() |
ಬೋನಿಗೆ ಬಿದ್ದ ಚಿರತೆ |
ಅರಣ್ಯ ಇಲಾಖೆಗೆ ಮಾಹಿತಿ ದೊರೆತ ಕೂಡಲೇ ಸ್ಥಳಕ್ಕೆ ಆಗಮಿಸಿ ಮಾಹಿತಿ ಸಂಗ್ರಹಿಸಿದ್ದರು. ಅಲ್ಲದೆ
ಪರಿಶೀಲಿಸಿ ಸ್ಥಳೀಯರಾದ ಗುರಿಕಂಡ ಆನಂದ ಶೆಟ್ಟಿ ಎಂಬವರ ಮನೆಯ ಬಳಿ 2 ತಿಂಗಳ ಹಿಂದೆ ಚಿರತೆ ಹಿಡಿಯಲು ಬೋನ್ ಅಳವಡಿಸಿ ಅದರಲ್ಲಿ ಕೋಳಿ ಇಡಲಾಗಿತ್ತು.
ಕಳೆದ ಮಧ್ಯರಾತ್ರಿ ಚಿರತೆ ಕೋಳಿ ಹಿಡಿಯಲು ಬೋನಿನೊಳಗೆ ಹೋಗಿ ಸೆರೆಯಾಗಿದೆ ಈಗಾಗಲೇ ಅರಣ್ಯ ಇಲಾಖೆಗೆ ಮಾಹಿತಿ ನೀಡಲಾಗಿದ್ದು, ಅಧಿಕಾರಿಗಳು ಸ್ಥಳಕ್ಕೆ ಆಗಮಿಸಿದ್ದಾರೆ.