ಬೋನ್ ಒಳಗೆ ಕೋಳಿ ಇಟ್ಟು ಚಿರತೆ ಸೆರೆಹಿಡಿದ ಅರಣ್ಯ ಇಲಾಖೆ: ಗ್ರಾಮಸ್ಥರ ಆತಂಕ ದೂರವಾಯ್ತು

Kadaba Times News

 ಕಡಬ ಟೈಮ್: ಚಿರತೆ ಪ್ರತ್ಯಕ್ಷಗೊಂಡು ಆತಂಕದಲ್ಲಿದ್ದ ಗ್ರಾಮಸ್ಥರು ಕೊಂಚ ಮಟ್ಟಿಗೆ ನಿಟ್ಟುಸಿರು ಬಿಟ್ಟಿದ್ದಾರೆ.ಹೌದು ಬೆಳ್ತಂಗಡಿಯ  ಸವಣಾಲು ಗ್ರಾಮದಲ್ಲಿ ಕಳೆದ 2 ತಿಂಗಳ ಹಿಂದೆ ಕಾಣಿಸಿಕೊಂಡ ಚಿರತೆ ಕೊನೆಗೆ ಬೋನಿಗೆ ಬಿದ್ದಿದೆ.

ಬೋನಿಗೆ ಬಿದ್ದ ಚಿರತೆ


ಅರಣ್ಯ ಇಲಾಖೆಗೆ ಮಾಹಿತಿ  ದೊರೆತ ಕೂಡಲೇ  ಸ್ಥಳಕ್ಕೆ ಆಗಮಿಸಿ ಮಾಹಿತಿ ಸಂಗ್ರಹಿಸಿದ್ದರು. ಅಲ್ಲದೆ ಪರಿಶೀಲಿಸಿ ಸ್ಥಳೀಯರಾದ  ಗುರಿಕಂಡ ಆನಂದ ಶೆಟ್ಟಿ ಎಂಬವರ ಮನೆಯ ಬಳಿ 2 ತಿಂಗಳ ಹಿಂದೆ ಚಿರತೆ ಹಿಡಿಯಲು ಬೋನ್ ಅಳವಡಿಸಿ ಅದರಲ್ಲಿ ಕೋಳಿ ಇಡಲಾಗಿತ್ತು.


ಕಳೆದ ಮಧ್ಯರಾತ್ರಿ ಚಿರತೆ ಕೋಳಿ ಹಿಡಿಯಲು ಬೋನಿನೊಳಗೆ ಹೋಗಿ ಸೆರೆಯಾಗಿದೆ ಈಗಾಗಲೇ ಅರಣ್ಯ ಇಲಾಖೆಗೆ ಮಾಹಿತಿ ನೀಡಲಾಗಿದ್ದು, ಅಧಿಕಾರಿಗಳು ಸ್ಥಳಕ್ಕೆ ಆಗಮಿಸಿದ್ದಾರೆ.

#buttons=(Ok, Go it!) #days=(20)

Our website uses cookies to enhance your experience. Learn More
Ok, Go it!
To Top