




ಮೃತಪಟ್ಟವರನ್ನುಕೊಟ್ಟಾಯಂ ನಿವಾಸಿಗಳಾದ ಚಿನ್ನಮ್ಮ (73), ಏಂಜೆಲೀನ ಅಬ್ರಹಾಂ (30) ಮತ್ತು ಆಲಿಸ್ ಥೋಮಸ್ (61) ಎಂದು ಗುರುತಿಸಲಾಗಿದೆ.
ಕೊಟ್ಟಾಯಂ ಚಿಂಗವನಂ ಎಂಬಲ್ಲಿಂದ ರಾಜಪುರಂ ಸಮೀಪ ಕಲ್ಲಾರಿನಲ್ಲಿ ನಡೆದ ವಿವಾಹ ಸಮಾರಂಭಕ್ಕೆ ಆಗಮಿಸಿ ಹಿಂತಿರುಗಲು ರೈಲ್ವೇ ನಿಲ್ದಾಣಕ್ಕೆ ಬಂದ ಸಂದರ್ಭ ಈ ಘಟನೆ ನಡೆದಿದೆ.
ಸಂಜೆ 7.30ರ ಸುಮಾರಿಗೆ ಮಲಬಾರ್ ಎಕ್ಸ್ ಪ್ರೆಸ್ ರೈಲಿನಲ್ಲಿ ತೆರಳಲು ರೈಲ್ವೆ ನಿಲ್ದಾಣಕ್ಕೆ ಹೋಗುತ್ತಿದ್ದ ಸಂದರ್ಭ ಹಳಿಯಲ್ಲಿ ಸಂಚರಿಸಿದ ಮತ್ತೊಂದು ಎಕ್ಸ್ಪ್ರೆಸ್ ರೈಲು ಢಿಕ್ಕಿ ಹೊಡೆದ ಪರಿಣಾಮ ಮೂವರು ಮಹಿಳೆಯರು ಸ್ಥಳದಲ್ಲೇ ಮೃತಪಟ್ಟಿದ್ದಾರೆ ಎಂದು ತಿಳಿದುಬಂದಿದೆ.