


ಕಡಬ ಟೈಮ್ಸ್, ರಾಜಕೀಯ: ಗುತ್ತಿಗೆದಾರನಿಗೆ ಜೀವ ಬೆದರಿಕೆ, ಜಾತಿ ನಿಂದನೆ ಕೇಸ್ ಆರೋಪದಲ್ಲಿ ಶಾಸಕ ಮುನಿರತ್ನ ಅವರ ವಿರುದ್ದ ಎಫ್.ಐ. ಆರ್ ದಾಖಲಾಗಿದೆ.
ಈ ಪ್ರಕರಣದ ಬೆನ್ನಲ್ಲೇ ರಾಜ್ಯ ಬಿಜೆಪಿ ಶಿಸ್ತು ಸಮಿತಿಯಿಂದ ಮುನಿರತ್ನ ಅವರಿಗೆ ನೋಟಿಸ್ ನೀಡಿರುವುದಾಗಿ ತಿಳಿದು ಬಂದಿದ್ದು, ತಾವು ಆಡಿದ ಮಾತುಗಳ ಸಂಬಂಧ ಐದು ದಿನಗಳ ಒಳಗೆ ಸ್ಪಷ್ಟೀಕರಣ ಕೊಡುವಂತೆ ಸೂಚನೆ ನೀಡಿರುವ ಪತ್ರ ವೈರಲ್ ಆಗಿದೆ.