ಗೃಹಲಕ್ಷ್ಮೀ ಯೋಜನೆ ಫಲಾನುಭವಿಗಳಿಗೆ ಗುಡ್ ನ್ಯೂಸ್:ಎರಡು ತಿಂಗಳ ಪೆಂಡಿಗ್ ಹಣ ಬ್ಯಾಂಕ್ ಖಾತೆಗೆ ಜಮೆ ಯಾವಾಗ ಗೊತ್ತಾ?

ಗೃಹಲಕ್ಷ್ಮೀ ಯೋಜನೆ ಫಲಾನುಭವಿಗಳಿಗೆ ಗುಡ್ ನ್ಯೂಸ್:ಎರಡು ತಿಂಗಳ ಪೆಂಡಿಗ್ ಹಣ ಬ್ಯಾಂಕ್ ಖಾತೆಗೆ ಜಮೆ ಯಾವಾಗ ಗೊತ್ತಾ?

Kadaba Times News

 ಬೆಂಗಳೂರು: ರಾಜ್ಯದ ಬಹುನಿರೀಕ್ಷಿತ ಯೋಜನೆಗಳಲ್ಲಿ ಒಂದಾದ ಗೃಹಲಕ್ಷ್ಮಿ ಯೋಜನೆ ಎಂದಿಗೂ ಸ್ಥಗಿತ ಆಗುವುದಿಲ್ಲ.  ಇದು ನಿತ್ಯ, ಸತ್ಯ, ನಿರಂತರ ಎಂದು ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್ ಹೇಳಿದರು.


ಸೋಮವಾರದಂದು ಬೆಂಗಳೂರಿನಲ್ಲಿ  ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ನಾನು ಈಗಾಗಲೆ ಹಲವು ಬಾರಿ ಗೃಹಲಕ್ಷ್ಮೀ ಯೋಜನೆ ಬಗ್ಗೆ ಸ್ಪಷ್ಟನೆ ನೀಡಿದ್ದೇನೆ. ಮತ್ತೊಮ್ಮೆ ಸ್ಪಷ್ಟನೆ ಕೊಡುತ್ತಿದ್ದೇನೆ. ಕಳೆದೆರಡು ತಿಂಗಳಿಂದ ಬರದಿರುವ ಹಣ ಒಂದೇ ಬಾರಿ ಫಲಾನುಭವಿಯ ಬ್ಯಾಂಕ್ ಖಾತೆಗೆ ಪಾವತಿಯಾಗಲಿದೆ ಎಂದು ತಿಳಿಸಿದರು.


ಲಿಂಗತ್ವ ಅಲ್ಪಸಂಖ್ಯಾತರಿಗೆ ಮೂರು ತಿಂಗಳ ಹಿಂದೆ  ಅರ್ಜಿ ಹಾಕಲು ಅವಕಾಶ ನೀಡಲಾಗಿತ್ತು. ಅವರಿಗೂ ಕೂಡ ಅಷ್ಟು ಬಾಕಿ ಹಣ ಒಟ್ಟಿಗೆ ಜಮಾ ಆಗಲಿದೆ ಎಂದು ಲಕ್ಷ್ಮೀ ಹೆಬ್ಬಾಳ್ಕರ್ ಸ್ಪಷ್ಟಪಡಿಸಿದರು.


ಅಂಗನವಾಡಿಗಳಲ್ಲಿ ಗಟ್ಟಿ ಬೆಲ್ಲ ವಿತರಣೆ: ಪಾಲಕರು ನಿರಾಕರಿಸಿದ ಕಾರಣ ಸಾವಯವ(ಆಗ್ರ್ಯಾನಿಕ್) ಬೆಲ್ಲದ ಬದಲಿಗೆ ಗಟ್ಟಿ ಬೆಲ್ಲವನ್ನೆ ಅಂಗನವಾಡಿ ಕೇಂದ್ರಗಳಲ್ಲಿ ನೀಡಲಾಗುವುದು. ಒಂದೂವರೆ ವರ್ಷದ ಹಿಂದಿನಿಂದಲೇ ಅಂಗನವಾಡಿ ಕೇಂದ್ರಗಳಲ್ಲಿ ಸಾವಯವ ಬೆಲ್ಲ ನೀಡಲಾಗುತ್ತಿತ್ತು. ಆದರೆ, ಪಾಲಕರು ವಿರೋಧಿಸಿದ ಕಾರಣ, .1ರಿಂದಲೇ ಗಟ್ಟಿ ಬೆಲ್ಲ ನೀಡುವುದಾಗಿ ಅವರು ತಿಳಿಸಿದರು.


#buttons=(Ok, Go it!) #days=(20)

Our website uses cookies to enhance your experience. Learn More
Ok, Go it!
To Top