


ಕಡಬ ಟೈಮ್ಸ್: ಸೆಂಟ್ರಿಂಗ್ ಮಿಲ್ಲರ್ ಆಪರೇಟರ್ ಆಗಿ ಕೆಲಸ ಮಾಡುತ್ತಿದ್ದ ಕೂಲಿ ಕಾರ್ಮಿಕನೋರ್ವ ಯಂತ್ರಕ್ಕೆ ಕೈಸಿಲುಕಿ ಬಲದ ಕೈಕಳೆದುಕೊಂಡು ಕೂಲಿ ಕೆಲಸ ಮಾಡಲು ಸಾಧ್ಯವಾಗದೆ ಕಂಗಾಲಾಗಿದ್ದು, ಅಸಾಯಕರಾಗಿ ಸಾರ್ವಜನಿಕರಿಂದ ಧನ ಸಹಾಯದ ನಿರೀಕ್ಷೆಯಲಿದ್ದಾರೆ.
ಕಡಬ ತಾಲೂಕು ಹಳೆನೇರಂಕಿ ಗ್ರಾಮದ ಕಲ್ಲೇರಿಯ ನಿವಾಸಿ ಓಮರಾ ಎಂಬವರ ಪುತ್ರ ರವಿಚಂದ್ರ ಈಗ ಸಾರ್ವಜನಿಕರ ಸಹಾಯದ ನಿರೀಕ್ಷೆಯಲ್ಲಿದ್ದಾರೆ. ಇವರು ಕೂಲಿ ಕಾರ್ಮಿಕನಾಗಿ ಸೆಟ್ರಿಂಗ್ ಕೆಲಸದಲ್ಲಿ ಮಿಲ್ಲರ್ ಅಪರೇಟರ್ ಆಗಿ ಕೆಲಸ ಮಾಡುತ್ತಿದ್ದರು. ಮೇ ೧೭ ನೇ ೨೦೨೪ ರಂದು ಬೆಳ್ತಂಗಡಿ ತಾಲೂಕಿನ ನಿಡ್ಲೆಯಲ್ಲಿ ಕೆಲಸ ಮಾಡುತ್ತಿದ್ದ ವೇಳೆ ಕಾಂಕ್ರೀಟ್ ಮಿಲ್ಲರ್ ಗೆ ಅನಾಚಕ್ ಆಗಿ ಬಲದ ಕೈ ಸಿಲುಕಿ ಕೈ ಮುಂಗೈಯಿಂದಲೇ ತುಂಡಾಗಿ ಹೋಗಿದೆ.
ಇದೀಗ ಇವರಿಗೆ ಬೇರೆ ಯಾವುದೇ ಕೂಲಿ ಕೆಲಸ ಮಾಡಲು ಸಾಧ್ಯವಾಗುತ್ತಿಲ್ಲ. ಕೈಯ ಚಿಕಿತ್ಸಾ ವೆಚ್ಚ ಸೇರಿದಂತೆ ಇತರ ಖರ್ಚುಗಳಿಂದಾಗಿ ಸಾಲ ಮಾಡಿ ಹೈರಾಣರಾಗಿರುವ ಇವರು ಹಣಕಾಸು ತೊಂದರೆಗೆ ಒಳಗಾಗಿ ಜೀವನ ನಿರ್ವಹಣೆ ಮಾಡಲು ಹೆಣಗಾಡುತ್ತಿದ್ದಾರೆ.