ನೆಲ್ಯಾಡಿ:ಮಣ್ಣಗುಂಡಿ ಬಳಿ ಡಿವೈಡರ್ ಗೆ ಡಿಕ್ಕಿ ಹೊಡೆದ ಕಾರು:ಓರ್ವ ಪ್ರಯಾಣಿಕ ಮೃತ್ಯು

Kadaba Times News

ಡಿವೈಡರ್ ಗೆ ಡಿಕ್ಕಿ ಹೊಡೆದ  ಕಾರು 

ಕಡಬ ಟೈಮ್ಸ್, ನೆಲ್ಯಾಡಿ: ಮಂಗಳೂರು-ಬೆಂಗಳೂರು ರಾಷ್ಟೀಯ ಹೆದ್ದಾರಿ 75ರ ನೆಲ್ಯಾಡಿ ಬಳಿ  ಕಾರೊಂದು ಡಿವೈಡರ್‌ಗೆ ಡಿಕ್ಕಿಯಾದ ಪರಿಣಾಮ ಕಾರಿನಲ್ಲಿದ್ದ ಪ್ರಯಾಣಿಕರೋರ್ವರು ಮೃತಪಟ್ಟ ಘಟನೆ ನ.17ರಂದು ಸಂಜೆ ನಡೆದಿದೆ.


ಪೆರಿಯಶಾಂತಿ ಸಮೀಪದ ಮಣ್ಣಗುಂಡಿ ಬಳಿ ಈ ಘಟನೆ ನಡೆದಿದ್ದು ಮೃತಪಟ್ಟವರನ್ನು ಕುಂಬ್ರದ ತಿಂಗಳಾಡಿ ಸಮೀಪದ ತ್ಯಾಗರಾಜೆಯ ಮಜ್ಜರಡ್ಕ ರಾಮಣ್ಣ ಪೂಜಾರಿ ಎಂಬವರ ಪುತ್ರ 26 ವರ್ಷದ ಜಗದೀಶ್ ಮೃತ ದುರ್ದೈವಿ.


ಗುಂಡ್ಯ ಗಡಿಯ ಶಿರಾಡಿ ಚಾಮುಂಡೇಶ್ವರಿ ಕ್ಷೇತ್ರಕ್ಕೆ ಹೋಗಿ ಬರುತಿದ್ದಾಗ ದುರ್ಘಟನೆ ನಡೆದಿದೆ. ರಾಷ್ಟ್ರೀಯ ಹೆದ್ದಾರಿ ಕಾಮಗಾರಿಯಿಂದ ನಡೆಯುತಿದ್ದರಿಂದ ಮಳೆ ಸುರಿಯುತ್ತಿರುವಾಗ ಸ್ಕಿಡ್ ಆಗಿ ಡಿವೈಡರ್ ಗೆ ಕಾರು ಅಪಘಾತವಾಗಿದೆ.

 ಕಾರು ಚಾಲಕ ಅಪಾಯದಿಂದ ಪಾರಾಗಿದ್ದಾರೆ. ಸ್ಥಳಕ್ಕೆ ನೆಲ್ಯಾಡಿ ಹೊರ ಠಾಣೆಯ ಪೊಲೀಸರು ಭೇಟಿ ನೀಡಿ ಪರಿಶೀಲಿಸುತ್ತಿದ್ದಾರೆ.

#buttons=(Ok, Go it!) #days=(20)

Our website uses cookies to enhance your experience. Learn More
Ok, Go it!
To Top