


![]() |
ಕಡಬ ಠಾಣೆ ಮುಂದೆ ಜಮಾಯಿಸಿದ ಗ್ರಾಮಸ್ಥರು |
ಕಡಬ: ಕಡಬ ತಾಲೂಕಿನ ಚಾರ್ವಾಕ ಗ್ರಾಮದ ಕುಮಾರಧಾರ ನದಿಯಲ್ಲಿ ನಡೆಯುವ ಮರಳುಗಾರಿಕೆ ವಿರುದ್ಧ ಗ್ರಾಮಸ್ಥರು ಸಿಡಿದೆದ್ದರು.
ಇದೀಗ ಬೋಟ್ ಕಟ್ಟಿ ಹಾಕಿದವರ ವಿರುದ್ದ ಕೇಸು ದಾಖಲಿಸುವ ಬಗ್ಗೆ ಬಂದ ಸುದ್ದಿಯ ಹಿನ್ನೆಲೆ ಭಾರೀ ಶುಕ್ರವಾರ ಸಂಜೆ ಸಂಖ್ಯೆಯಲ್ಲಿ ಕಡಬ ಠಾಣೆಗೆ ಗ್ರಾಮಸ್ಥರು ಆಗಮಿಸಿದ್ದಾರೆ. ಮರಳು ತೆಗೆಯುವ ತಂಡ ಅಟ್ರಾಸಿಟಿ ಕೇಸು ದಾಖಲಿಸುವುದಾಗಿ ಬೆದರಿಸಿರುವ ಆರೋಪ ಕೇಳಿ ಬಂದಿದೆ ಎನ್ನಲಾಗಿದೆ.
ಚಾರ್ವಾಕ ಕುಂಬ್ಲಾಡಿ ಕುಕ್ಕೆನಾಥ ಬಾಲಸುಬ್ರಹ್ಮಣ್ಯ ದೇವಸ್ಥಾನದ ಪ್ರಮುಖರು ಊರವರು ಸೇರಿ ಚಾರ್ವಾಕ ಗ್ರಾಮದ ಭಾಗದಲ್ಲಿ ಮರಳುಗಾರಿಕೆಗೆ ತೀವ್ರ ವಿರೋಧ ವ್ಯಕ್ತಪಡಿಸಿದಲ್ಲದೆ, ನಿರ್ಣಯವನ್ನೂ ಮಾಡಿದ್ದರು.ಮರಳುಗಾರಿಕೆಯಿಂದ ದೈವಸಾನಿಧ್ಯ ನಾಶ ಮತ್ತು ಪ್ರಕೃತಿ ನಾಶವಾದ ಕಾರಣ ಊರವರು ಮರಳುಗಾರಿಕೆಗೆ ವಿರೋಧ ವ್ಯಕ್ತಪಡಿಸಿ ಸಂಬಂಧಪಟ್ಟ ಕಾಣಿಯೂರು ಗ್ರಾಮ ಪಂಚಾಯತಿಗೂ ಮನವಿ ಸಲ್ಲಿಸಿ ಇಲಾಖೆಗಳಿಗೆಲ್ಲ ಮರಳುಗಾರಿಕೆ ನಡೆಸದಂತೆ ಪತ್ರ ಬರೆದಿದ್ದಾರೆ.
ಎರಡು ದಿನದ ಹಿಂದೆ ಚಾರ್ವಾಕ ಭಾಗದಲ್ಲಿ ಮರಳುಗಾರಿಕೆಗೆ ಬಂದ ತಂಡಕ್ಕೆ ಊರವರ ಪ್ರತಿರೋಧ ವ್ಯಕ್ತಪಡಿಸಿದಾಗ ಪರಾರಿಯಾಗಿತ್ತು. ನ.29ರಂದು ಮತ್ತೆ ಬೋಟ್ ಮೂಲಕ ತಂಡ ಬಂದಾಗ ಬೋಟನ್ನು ಹಿಡಿದು ಚಾರ್ವಾಕ ಭಾಗದಲ್ಲಿ ಕಟ್ಟಿ ಹಾಕಲಾಗಿತ್ತು. ಬೋಟ್ ನಲ್ಲಿದ್ದ ಮರಳು ಕಾರ್ಮಿಕರು ಈಜಿ ಆಚೆ ಬದಿಗೆ ಪರಾರಿಯಾಗಿದ್ದರು.
ಮರಳುಗಾರಿಕೆಯಿಂದ ದೈವಸಾನಿಧ್ಯ ನಾಶ ಮತ್ತು ಪ್ರಕೃತಿ ನಾಶವಾದ ಕಾರಣ ಊರವರು ಮರಳುಗಾರಿಕೆಗೆ ವಿರೋಧ ವ್ಯಕ್ತಪಡಿಸಿ ಸಂಬಂಧಪಟ್ಟ ಕಾಣಿಯೂರು ಗ್ರಾಮ ಪಂಚಾಯತಿಗೂ ಮನವಿ ಸಲ್ಲಿಸಿ ಇಲಾಖೆಗಳಿಗೆಲ್ಲ ಮರಳುಗಾರಿಕೆ ನಡೆಸದಂತೆ ಪತ್ರ ಬರೆದಿದ್ದರು.