




ಕಡಬ ಟೈಮ್, ದಕ್ಷಿಣ ಕನ್ನಡ: ದಶಕಗಳ ಬಳಿಕ ಮಲೆನಾಡಿನಲ್ಲಿ ನಕ್ಸಲರ ಸದ್ದು ಹೆಚ್ಚಾಗಿದೆ ಎನ್ನುವ ಬಗ್ಗೆ
ಅಂತಕಕಾರಿ ಮಾಹಿತಿ ಹೊರಬಿದ್ದಿದೆ. 2014 ರ ನಂತರ ಮಲೆನಾಡಿನಲ್ಲಿ ಕೆಂಪು ಉಗ್ರರ ಹೆಜ್ಜೆ ಮತ್ತೆ 2024 ರಲ್ಲಿ ಗುರುತು ಪತ್ತೆಯಾಗಿದೆ.
ಪಶ್ಚಿಮ
ಘಟ್ಟ ವ್ಯಾಪ್ತಿಯಲ್ಲಿ ಒತ್ತುವರಿ ತೆರವು ಕಸ್ತೂರಿ ರಂಗ್ ವರದಿ ಭಯದ ಸಮಸ್ಯೆಗಳನ್ನು ಮುಂದಿಟ್ಟುಕೊಂಡು ಗ್ರಾಮಸ್ಥರ ಸಂಪರ್ಕ ಮಾಡುತ್ತಿರುವ ಕೆಂಪು ಉಗ್ರರ ಬಗ್ಗೆ ಪೊಲೀಸರು ಜಾಡು ಹಿಡಿಯಲು ಮುಂದಾಗಿದ್ದಾರೆ.
ಚಿಕ್ಕಮಗಳೂರು ಜಿಲ್ಲೆಯ ಶೃಂಗೇರಿ ಪೊಲೀಸರು ಹಾಗೂ ಎ.ಎನ್.ಎಫ್ ಪೊಲೀಸರು ನಕ್ಸಲ್ ಬೆಂಬಲಿಗರನ್ನು ದಕ್ಷಿಣ ಕನ್ನಡ ಜಿಲ್ಲೆಯ ಬೆಳ್ತಂಗಡಿ ತಾಲೂಕಿನ ಧರ್ಮಸ್ಥಳ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ರಾಜ್ಯ ಗುಪ್ತಚರ ಮಾಹಿತಿ ಆಧಾರದಲ್ಲಿ ನಕ್ಸಲ್ ಬೆಂಬಲಿಗ ಇಬ್ಬರನ್ನು ವಶಕ್ಕೆ ಪಡೆದು ವಿಚಾರಣೆ ನಡೆಸುತ್ತಿದ್ದಾರೆ ಎನ್ನಲಾಗಿದೆ.
ಕಳೆದ ಎರಡು ದಿನದ ಹಿಂದೆ ದಕ್ಷಿಣ ಕನ್ನಡ ಜಿಲ್ಲೆಯ ಬೆಳ್ತಂಗಡಿ ತಾಲೂಕಿನ ಧರ್ಮಸ್ಥಳ ಗ್ರಾಮದಲ್ಲಿ ಓರ್ವ ವ್ಯಕ್ತಿಯನ್ನು ಭೇಟಿಯಾಗಲು ಬಂದ ಚಿಕ್ಕಮಗಳೂರು ಜಿಲ್ಲೆಯ ಕೊಪ್ಪದ ಗಡಿಭಾಗದ ಇಬ್ಬರು ಶಂಕಿತ ವ್ಯಕ್ತಿಗಳ ಬಗ್ಗೆ ರಾಜ್ಯ ಗುಪ್ತಚರ ಇಲಾಖೆಗೆ ಬಂದ ಖಚಿತ ಮಾಹಿತಿ ಆಧಾರದಲ್ಲಿ ವಶಕ್ಕೆ ಪಡೆದುಕೊಂಡು ವಿಚಾರಣೆ ನಡೆಸುತ್ತಿದ್ದು, ಇಬ್ಬರಿಗೆ ಸಂಬಂಧಿಸಿದ ಸ್ಥಳದಲ್ಲಿ ಶೋಧ ನಡೆಸಿ ನಾಡ ಪಿಸ್ತೂಲ್ ವಶಕ್ಕೆ ಪಡೆಯಲಾಗಿದೆ ಎನ್ನಲಾಗಿದೆ.
ಕಾರ್ಕಳ ಎ.ಎನ್.ಎಫ್ ಎಸ್ಪಿ ಹಾಗೂ ಚಿಕ್ಕಮಗಳೂರು ಎಸ್ಪಿ ನೇತೃತ್ವದ ತಂಡದ ಪೊಲೀಸರು ನಕ್ಸಲರಿಗೆ ಮಾಹಿತಿ ಹಾಗೂ ಸಹಕಾರ ಹಿನ್ನಲೆಯಲ್ಲಿ ಇಬ್ಬರು ಶಂಕಿತರಿಗೆ ಸಂಬಂಧಿಸಿದ ಸ್ಥಳದಲ್ಲಿ ಶೃಂಗೇರಿ ಪೊಲೀಸ್ ಠಾಣೆಗೆ ಕರೆತಂದು ತೀವ್ರ ವಿಚಾರಣೆ ನಡೆಸುತ್ತಿದ್ದಾರೆ ಎನ್ನಲಾಗಿದೆ.
ಈ ಎಲ್ಲಾ ಬೆಳವಣಿಯ
ಬೆನ್ನಲ್ಲೇ ಸುಬ್ರಹ್ಮಣ್ಯ, ಗುಂಡ್ಯ, ಕಡಬ, ಕೊಕ್ಕಡ ಸೇರಿದಂತೆ ಹಲವು ಕಡೆ ಕೊಂಬಿಂಗ್ ನಡೆಸಲು ತಯಾರಿ ನಡೆಯುವ ಸಾಧ್ಯತೆ ಇದೆ . ಕಾಡಿನಾದ್ಯಂತ ಪ್ರತಿ ನಿತ್ಯ 10 ಕಿ.ಮೀ. ವ್ಯಾಪ್ತಿಯಲ್ಲಿ ಕೊಂಬಿಂಗ್ ನಡೆಯಲಿದೆ ಎನ್ನಲಾಗುತ್ತಿದೆ.
ಕೆಲವು ತಿಂಗಳ ಹಿಂದೆ ಕಲ್ಮಕಾರಿನ ರಬ್ಬರ್ ಎಸ್ಟೇಟ್ ಸಮೀಪಕ್ಕೆ ಬಂದಿದ್ದ ನಕ್ಸಲರು ಅಂಗಡಿಯೊಂದರಿಂದ ಬಂದು ದಿನಸಿ ತೆಗೆದುಕೊಂಡು ಹೋಗಿದ್ದರು. ಇದು ದೊಡ್ಡ ಮಟ್ಟದ ಸುದ್ದಿಯಾಗಿತ್ತು. ಇದಾದ ಬಳಿಕ ನಕ್ಸಲರು ತಮ್ಮ ದಿಕ್ಕು ಬದಲಾಯಿಸಿ ಪ್ರಯಾಣಿಸುತ್ತಿದ್ದಾರೆ. ಮಾತ್ರವಲ್ಲ ಕಾಡಿನಲ್ಲಿದ್ದುಕೊಂಡೇ ನಾಡಿನಿಂದ ಮಾಹಿತಿ ತರಿಸಿಕೊಳ್ಳುತ್ತಿದ್ದಾರೆ ಅನ್ನುವ ವಿಚಾರ ಬೆಚ್ಚಿ ಬೀಳಿಸಿದೆ. ಈ ಹಿನ್ನೆಲೆಯಲ್ಲಿ ಪೊಲೀಸರು ಹೆಚ್ಚಿನ ತನಿಖೆ ನಡೆಸಿದ್ದರು.