ಕಡಬದಲ್ಲಿ ಮಲೆನಾಡು ಜನಹಿತ ರಕ್ಷಣಾ ವೇದಿಕೆಯಿಂದ ಮಹತ್ವದ ಸುದ್ದಿಗೋಷ್ಠಿ

ಕಡಬದಲ್ಲಿ ಮಲೆನಾಡು ಜನಹಿತ ರಕ್ಷಣಾ ವೇದಿಕೆಯಿಂದ ಮಹತ್ವದ ಸುದ್ದಿಗೋಷ್ಠಿ

Kadaba Times News

 

ಕಡಬದಲ್ಲಿ ಮಲೆನಾಡು ಹಿತರಕ್ಷಣಾ ವೇದಿಕೆಯಿಂದ ಪ್ರೆಸ್ ಮೀಟ್

ಕಡಬ:  ಕಸ್ತೂರಿ ರಂಗನ್ ವರದಿ ಜಾರಿಯನ್ನು ವಿರೋಧಿಸಿ ಮಲೆನಾಡು ಜನಹಿತ ರಕ್ಷಣಾ ವೇದಿಕೆಯ ನೇತೃತ್ವದಲ್ಲಿ ಗುಂಡ್ಯದಲ್ಲಿ .15 ರಂದು ಬೆಳಗ್ಗೆ ಗಂಟೆಗೆ 10.30ಕ್ಕೆ ನಡೆಯಲಿರುವ ಬೃಹತ್ ಪ್ರತಿಭಟನಾ ಸಭೆಯಲ್ಲಿ ಬಾಧಿತ ಗ್ರಾಮಗಳಿಂದ ಸಾವಿರಾರು ಜನರು ಭಾಗವಹಿಸಿಲಿದ್ದಾರೆ ಎಂದು ಮಲೆನಾಡು ಜನಹಿತ ರಕ್ಷಣಾ ವೇದಿಕೆಯ ಸಂಚಾಲಕ ಕಿಶೋರ್ ಶಿರಾಡಿ ಹೇಳಿದರು.


ಅವರು ಬುಧವಾರ ಪತ್ರಿಕಾಗೋಷ್ಠಿಯಲ್ಲಿ ಕಡಬದಲ್ಲಿ ಮಾತನಾಡಿ, ಬಾಧಿತ ಗ್ರಾಮಗಳ ವ್ಯಾಪ್ತಿಯಲ್ಲಿ ಅಂಗಡಿ ಮುಂಗಟ್ಟುಗಳನ್ನು ಬಂದ್ ಮಾಡಿ ಗುಂಡ್ಯದಲ್ಲಿ ನಡೆಯುವ ಪ್ರತಿಭಟನೆಯಲ್ಲಿ ಭಾಗವಹಿಸುವಂತೆ ಜನರಿಗೆ ತಿಳಿಸಲಾಗಿದೆ. ಪಶ್ಚಿಮ ಘಟ್ಟ ಸಂರಕ್ಷಣೆಯ ನೆಪದಲ್ಲಿ ಪಶ್ಚಿಮ ಘಟ್ಟದ ತಪ್ಪಲು ಮತ್ತು ಅರಣ್ಯದಂಚಿನಲ್ಲಿವಾಸಿಸುವ ಜನರನ್ನು ಆತಂಕದ ಸ್ಥಿತಿಯಲ್ಲಿ ಬದುಕುವಂತೆ ಮಾಡುತ್ತಿರುವ ಕಾನೂನುಗಳ ಜಾರಿಯನ್ನು ತಡೆಯಲು ಎಲ್ಲರೂ ಹೋರಾಡಬೇಕಿದೆ. ಕಳೆದುಕೊಳ್ಳುವ ಸಂಘಟಿತರಾಗಿ ಭೂಮಿ ಕುಟುಂಬಗಳಿಗೆ ಪುನರ್ವಸತಿ ಕಲ್ಪಿಸುವ ಯೋಜನೆಯಬಗ್ಗೆಯೂ ಮಾಹಿತಿ ನೀಡದೆ ಜನರನ್ನು ಭಯಭೀತರನ್ನಾಗಿಸಿರುವ ವರದಿಯ ಬಗ್ಗೆ ಸರಕಾರಗಳೂ ಅಗತ್ಯ ಪ್ರತಿರೋಧ ತೋರಿಸದೆ ಜನರನ್ನು ವಂಚಿಸುತ್ತಿದೆ. ವರದಿಯನ್ನು ಕೇಂದ್ರ ಮತ್ತು ರಾಜ್ಯ ಸರಕಾರಗಳು ಸಂಪೂರ್ಣವಾಗಿ ಕೈಬಿಡಬೇಕು ಎಂದು ಅವರು ಒತ್ತಾಯಿಸಿದರು.


ಪ್ರತಿಭಟನೆ ಸಭೆಯಲ್ಲಿ ಕಸ್ತೂರಿ ರಂಗನ್ ವರದಿ ಜಾರಿಯ ಭೀತಿಯಲ್ಲಿರುವ ಎಲ್ಲ ಗ್ರಾಮಗಳು ಜನರು ಭಾಗವಹಿಸಿ ಸರಕಾರಕ್ಕೆ ಮತ್ತು ಸಂಬಂಧಪಟ್ಟವರಿಗೆ ಸೂಕ್ತ ಸಂದೇಶವನ್ನು ರವಾನಿಸುವ ಅಗತ್ಯವಿದೆ. ಇದು ರೈತ ಜನರ ಅಳಿವು ಉಳಿವಿನ ಪ್ರಶ್ನೆಯಾಗಿರುವುದರಿಂದ ಸಾರ್ವಜನಿಕ ಹೆಚ್ಚಿನ ಸಂಖ್ಯೆಯಲ್ಲಿ ಸಭೆಯಲ್ಲಿ ಭಾಗವಹಿಸುವಂತೆ ಅವರು ಮನವಿ ಮಾಡಿದರು.ಮಲೆನಾಡು ಜನಹಿತ ರಕ್ಷಣಾ ವೇದಿಕೆಯ ಪ್ರಮುಖರು ಉಪಸ್ಥಿತರಿದ್ದರು.




#buttons=(Ok, Go it!) #days=(20)

Our website uses cookies to enhance your experience. Learn More
Ok, Go it!
To Top