ಕಡಬ: ಬೆಳ್ಳಂಬೆಳಗ್ಗೆ ವೃದ್ದ ದಂಪತಿಗಳು ವಾಸವಿದ್ದ ಮನೆಯನ್ನು ಜೆಸಿಬಿ ಬಳಸಿ ಕೆಡವಿದ ಅಧಿಕಾರಿಗಳು

ಕಡಬ: ಬೆಳ್ಳಂಬೆಳಗ್ಗೆ ವೃದ್ದ ದಂಪತಿಗಳು ವಾಸವಿದ್ದ ಮನೆಯನ್ನು ಜೆಸಿಬಿ ಬಳಸಿ ಕೆಡವಿದ ಅಧಿಕಾರಿಗಳು

Kadaba Times News

ಮನೆ ಕೆಡವಲು ಬಂದ ಅಧಿಕಾರಿಗಳ ತಂಡ ಮತ್ತು ಜೆಸಿಬಿ


ಕಡಬ: ಸರ್ಕಾರಿ ಜಾಗದಲ್ಲಿ ಮನೆ ನಿರ್ಮಿಸಿ ಆರುವರ್ಷಗಳಿಂದ ವಾಸವಿದ್ದ ವೃದ್ದ ದಂಪತಿಗಳ ಮನೆಯನ್ನು ಪೊಲೀಸ್ ನೇತೃತ್ವದಲ್ಲಿ ಅಧಿಕಾರಿಗಳು ಬೆಳ್ಳಂಬೆಳಗ್ಗೆ  ನೆಲಸಮ ಮಾಡಿದ ಅಮಾನವೀಯ ಘಟನೆಯೊಂದು ನಡೆದಿದೆ.


ಕಡಬ ತಾಲೂಕಿನ ಕೌಕ್ರಾಡಿಯಲ್ಲಿ ವಾಸವಾಗಿರುವ ರಾಧಮ್ಮ ಮತ್ತು ಮುತ್ತು ಸ್ವಾಮಿ ದಂಪತಿ ಮನೆಯನ್ನು ಬುಧವಾರ ಏಕಾಏಕಿ ಧ್ವಂಸಗೊಳಿಸಲಾಗಿದೆ.


ದಂಪತಿ ಮೂಲತಃ ಚಿತ್ರದುರ್ಗ ಜಿಲ್ಲೆಯ ಹಟ್ಟಿಯವರು. ಕೂಲಿ ಕೆಲಸಕ್ಕಾಗಿ ಕರಾವಳಿಗೆ ಆಗಮಿಸಿ ಕಡಬ ತಾಲೂಕಿನ ಉಪ್ಪಿನಂಗಡಿ ಹೋಬಳಿಯ ಕೌಕ್ರಾಡಿ ಗ್ರಾಮದ ಆಗಮಿಸಿ ವಾಸಗಿದ್ದಾರೆ.ಕೌಕ್ರಾಡಿ ಗ್ರಾಮದ ಕಾವಿನಬಾಗಿಲು ಎಂಬಲ್ಲಿ ಸರ್ಕಾರಿ ಜಾಗದ ಸರ್ವೇ ನಂಬರ್ 123/1ರಲ್ಲಿ ಕಳೆದ 6 ವರ್ಷಗಳಿಂದ ವಾಸಿಸುತ್ತಿದ್ದಾರೆ.  ದಂಪತಿಗೆ ಯಾವುದೆ ಪಿತ್ರಾರ್ಜಿತ ಆಸ್ತಿ ಇಲ್ಲ. ಹೀಗಾಗಿ ಸರ್ಕಾರಿ ಜಾಗ 123/1ರಲ್ಲಿ ಕಾಪಿನಬಾಗಿಲು ಎಂಬಲ್ಲಿ ಸಣ್ಣ ಮನೆಕಟ್ಟಿಕೊಂಡಿದ್ದರು. ದಂಪತಿ ನಿತ್ಯ ಕೂಲಿ ಕೆಲಸ ಮಾಡುತ್ತಾ ಜೀವನ ಸಾಗಿಸುತ್ತಿದ್ದಾರೆ.


ವೃದ್ಧ ದಂಪತಿ ಸರ್ಕಾರಿ ಜಾಗದಲ್ಲಿ ಇದ್ದಾರೆ ಎಂಬ ಕಾರಣಕ್ಕಾಗಿ ಬೆಳ್ತಂಗಡಿ ತಾಲೂಕಿನ ಅಶೋಕ್ಆಚಾರ್ಯ ಎಂಬವರು ಇವರನ್ನು ಒಕ್ಕಲೆಬ್ಬಿಸುವ ಸಲುವಾಗಿ ಹೈಕೋರ್ಟ್ನಲ್ಲಿ ದಾವೆ ಹೂಡಿದ್ದಾರೆ. ಸರ್ಕಾರಿ ಜಾಗ ಖಾಲಿ ಮಾಡಲು ಹೈಕೋರ್ಟ್ಸೂಚನೆ ನೀಡಿದ ಕಾರಣ ಕಳೆದ ಫೆಬ್ರವರಿಯಲ್ಲೇ ಮನೆ ತೆರವಿಗೆ ಅಧಿಕಾರಿಗಳು ಮುಂದಾಗಿದ್ದರು. ಆದರೆ ಸಾರ್ವಜನಿಕರಿಂದ ತೀವ್ರ ಆಕ್ರೋಶ ವ್ಯಕ್ತವಾದ ಹಿನ್ನೆಲೆಯಲ್ಲಿ ಮನೆ ಕೆಡವದೆ ಪ್ರಕರಣ ತಣ್ಣಗಾಗಿತ್ತು.ಇಂದು ದಿಢೀರ್ಎಂದು ಆಗಮಿಸಿದ ಅಧಿಕಾರಿಗಳು ಮನೆಯ ವಸ್ತುಗಳನ್ನು ಹೊರಗೆ ಎಸೆದು ಮನೆಯನ್ನು ಕೆಡವಿ ಹಾಕಿದ್ದಾರೆ. ವೃದ್ಧ ದಂಪತಿ ಕಣ್ಣೀರು ಹಾಕಿದರೂ ಕರಗದ ಅಧಿಕಾರಿಗಳು ಮನೆ ತೆರವುಗೊಳಿಸಿದ್ದಾರೆ. ಕಡಬ ತಹಶೀಲ್ದಾರ್ ಪ್ರಭಾಕರ ಖಜೂರೆ, ಆರ್ ಪೃಥ್ವಿರಾಜ್, ಉಪ್ಪಿನಂಗಡಿ ಪೊಲೀಸರ ನೇತೃತ್ವದಲ್ಲಿ ಮನೆ ತೆರವು ಮಾಡಲಾಗಿದೆ.

 

ಸರ್ಕಾರಿ ಜಾಗದಲ್ಲಿ ನಾವು ನಿರ್ಮಿಸಿರುವ ಸಣ್ಣ ಮನೆಯಲ್ಲಿ ಜೀವನ ನಡೆಸಲು ಅವಕಾಶ ಕಲ್ಪಿಸಿಕೊಡಿ. ಅಥವಾ ದಯಮಾಡಿ ವೃದ್ಧರಾದ ನಮಗೆ ದಯಾಮರಣ ಅಥವಾ ಇನ್ನಾವುದೇ ರೀತಿಯಲ್ಲಿ ಒಳ್ಳೆಯ ಮರಣಕ್ಕೆ ಅವಕಾಶವನ್ನು ನೀಡಿ ಎಂದು ಈ ಹಿಂದೆ  ರಾಷ್ಟ್ರಪತಿಯವರಿಗೆ ಪತ್ರ ಬರೆದಿದ್ದರು.




#buttons=(Ok, Go it!) #days=(20)

Our website uses cookies to enhance your experience. Learn More
Ok, Go it!
To Top